38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

ಮುಂಡಾಜೆ: ಪ್ರೌಢಶಾಲೆ ಮುಂಡಾಜೆ ಇದರ 1989-90 ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಡಿ.24 ರಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇದರ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ಯಾರ್ಥಿ ಮುರಳಿಧರ ನಾಯಕ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು. ಆ ಸಾಲಿನ ವಿದ್ಯಾರ್ಥಿಗಳಾದ ಶೇಖರ ನಾಯ್ಕ, ಜಯಾನಂದ ಗೌಡ, ರಾಜೇಶ್ ಗೌಡ, ಚಂದ್ರಮೋಹನ ಮರಾಠ, ಪುರುಷೋತ್ತಮ ಶೆಟ್ಟಿ ಅಗರಿ, ಸುಜಯ ನಾಗೇಂದ್ರ ಅಡೂರ್, ಪ್ರದರ್ಶ ಪರಾಂಜಪೆ, ಭಾಸ್ಕರ ಗೌಡ ದೇವಸ್ಯ, ಮುರಳಿಧರ ನಾಯಕ್, ಟಾಗೂ‌ರ್ ನಾಥ್ ಶೆಟ್ಟಿ ಹುರ್ತಾಜೆ, ಪ್ರಸನ್ನ ಕೆ ಎಂ, ಸುಧೀರ್ ಪರಾಂಜಪೆ, ಜಯರಾಮ ಶೆಟ್ಟಿ ನೆಯಾಲ್, ಪ್ರಸನ್ನ ತಾಮನ್ಮರ್, ಜಲಜ ಚಾರ್ಮಾಡಿ, ಅನಿತಾ, ರಕ್ಷಾ,ಲತಾ, ಸಾವಿತ್ರಿ ಇವರುಗಳು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾವು ಬೆಳೆದು ಬಂದ ದಾರಿ ಹಾಗೂ ಇನ್ನಿತರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ವಿನಯ ಚಂದ್ರ, ಸದಸ್ಯರಾದ ನಾರಾಯಣ ಪಢಕೆ ಇವರು ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!