ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

ಮುಂಡಾಜೆ: ಪ್ರೌಢಶಾಲೆ ಮುಂಡಾಜೆ ಇದರ 1989-90 ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಡಿ.24 ರಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇದರ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ಯಾರ್ಥಿ ಮುರಳಿಧರ ನಾಯಕ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು. ಆ ಸಾಲಿನ ವಿದ್ಯಾರ್ಥಿಗಳಾದ ಶೇಖರ ನಾಯ್ಕ, ಜಯಾನಂದ ಗೌಡ, ರಾಜೇಶ್ ಗೌಡ, ಚಂದ್ರಮೋಹನ ಮರಾಠ, ಪುರುಷೋತ್ತಮ ಶೆಟ್ಟಿ ಅಗರಿ, ಸುಜಯ ನಾಗೇಂದ್ರ ಅಡೂರ್, ಪ್ರದರ್ಶ ಪರಾಂಜಪೆ, ಭಾಸ್ಕರ ಗೌಡ ದೇವಸ್ಯ, ಮುರಳಿಧರ ನಾಯಕ್, ಟಾಗೂ‌ರ್ ನಾಥ್ ಶೆಟ್ಟಿ ಹುರ್ತಾಜೆ, ಪ್ರಸನ್ನ ಕೆ ಎಂ, ಸುಧೀರ್ ಪರಾಂಜಪೆ, ಜಯರಾಮ ಶೆಟ್ಟಿ ನೆಯಾಲ್, ಪ್ರಸನ್ನ ತಾಮನ್ಮರ್, ಜಲಜ ಚಾರ್ಮಾಡಿ, ಅನಿತಾ, ರಕ್ಷಾ,ಲತಾ, ಸಾವಿತ್ರಿ ಇವರುಗಳು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾವು ಬೆಳೆದು ಬಂದ ದಾರಿ ಹಾಗೂ ಇನ್ನಿತರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ವಿನಯ ಚಂದ್ರ, ಸದಸ್ಯರಾದ ನಾರಾಯಣ ಪಢಕೆ ಇವರು ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya
error: Content is protected !!