23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ , ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಆಶ್ರಯದಲ್ಲಿ ಗುರುವಾಯನಕೆರೆ ಅಯ್ಯಪ್ಪನಗರ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ವಠಾರದಲ್ಲಿ ವೇದಮೂರ್ತಿ ಶ್ರೀ ರಘುರಾಮ ಭಟ್ ಮಠ ಇವರ ಪೌರೋಹಿತ್ಯದಲ್ಲಿ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಸುಕುಮಾರ ಗುರುಸ್ವಾಮಿ ಕಳೆಂಜ ಕಾಯರ್ತಡ್ಕ ಇವರ ನೇತೃತ್ವದಲ್ಲಿ ಅಯ್ಯಪ್ಪ ದೀಪೋತ್ಸವವು ಡಿ.27 ರಂದು ನಡೆಯಲಿದೆ.

ಬೆಳಗ್ಗೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಪೂಜೆ, ನಾಗತಂಬಿಲ, ಗಣಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಬೆಳ್ತಂಗಡಿ ಭಗವಾನ್ ಶಿರಾಡಿ ಸತ್ಯಸಾಯಿ ಸೇವಾ ಕ್ಷೇತ್ರ ಹಳೇಕೋಟೆ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಮಂಡಲ ಪೂಜೆ, ತನ್ನೀರಪ್ಪ ಸೇವೆ, ದೇವಿ ದರ್ಶನ, ಕೆಂಡಸೇವೆ, ಶ್ರೀ ಅಯ್ಯಪ್ಪ ವಾವರ ಯುದ್ಧ, ಸುಬ್ರಹ್ಮಣ್ಯ ದರ್ಶನ, ಪ್ರಸಾದ ವಿತರಣೆ ನಡೆಯಲಿದೆ.

ರಾತ್ರಿ ಗಂಟೆ 9.30 ರಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಮೇಳದವರಿಂದ ಅಪ್ಪೆ ಮಂತ್ರದೇವತೆ ನಡೆಯಲಿದೆ ಎಂದು ದೀಪೋತ್ಸವ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದರು.

Related posts

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya
error: Content is protected !!