ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ರಾಕೇಶ್ ಹೆಗ್ಡೆ ಬಳಂಜ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರಾಗಿ ಯುವ ಸಂಘಟಕ,ಉದ್ಯಮಿ,ಕೊಡಗೈ ದಾನಿ ಜನಾರ್ಧನ ಪೂಜಾರಿ ಕೊಡಂಗೆ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಗುರುಪ್ರಸಾದ್ ಹೆಗ್ಡೆ ಬಳಂಜ, ವಿಶ್ವನಾಥ ಹೊಳ್ಳ ನಾಲ್ಕೂರು, ಧರ್ಣಪ್ಪ ನಾವರ, ಕೊರಗಪ್ಪ ಬಡಗಕಾರಂದೂರು, ಮಮತಾ ತೆಂಕಕಾರಂದೂರು, ಸುಂದರಿ ಪಿಲ್ಯ, ಹೇಮಂತ್, ದಿನೇಶ್ ಪಿ.ಕೆ ಬಳಂಜ, ದೇಜಪ್ಪ ಪೂಜಾರಿ ಬಳಂಜ, ದೇವಿಪ್ರಸಾದ್ ಶೆಟ್ಟಿ ಬಡಗಕಾರಂದೂರು ಆಯ್ಕೆಯಾಗಿರುತ್ತಾರೆ.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ಹಾಗೂ ಸಿಬ್ಬಂದಿ ವರ್ಗದವರು,ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದರು.

Leave a Comment

error: Content is protected !!