37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ, ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಕಳೆದ ರಾತ್ರಿ ಮಜಲಡ್ಡ ರಂಜಿತ್ ಅವರ ಮನೆಯ ಅಂಗಳದಲ್ಲಿ ಮಲಗಿದ ಸಾಕು ನಾಯಿಗಳನ್ನು ಎತ್ತಿಕೊಂಡು ಹೋಗಿದೆ. ಪರಿಸರದಲ್ಕಿ ನಾಯಿ, ಬೆಕ್ಕು, ಕಣ್ಮರೆಯಾಗುತ್ತಿದೆ. ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

ಇಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೆಲ ಸಮಯದ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಬೋನ್ ಅಳವಡಿಸಿದರು ಪ್ರಯೋಜನವಾಗಲಿಲ್ಲ. ಚಿರತೆ ಕಾಟ ತಪ್ಪಿಸಲು ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!