24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ, ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಕಳೆದ ರಾತ್ರಿ ಮಜಲಡ್ಡ ರಂಜಿತ್ ಅವರ ಮನೆಯ ಅಂಗಳದಲ್ಲಿ ಮಲಗಿದ ಸಾಕು ನಾಯಿಗಳನ್ನು ಎತ್ತಿಕೊಂಡು ಹೋಗಿದೆ. ಪರಿಸರದಲ್ಕಿ ನಾಯಿ, ಬೆಕ್ಕು, ಕಣ್ಮರೆಯಾಗುತ್ತಿದೆ. ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

ಇಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೆಲ ಸಮಯದ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಬೋನ್ ಅಳವಡಿಸಿದರು ಪ್ರಯೋಜನವಾಗಲಿಲ್ಲ. ಚಿರತೆ ಕಾಟ ತಪ್ಪಿಸಲು ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya
error: Content is protected !!