July 23, 2026
Uncategorized

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ, ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಕಳೆದ ರಾತ್ರಿ ಮಜಲಡ್ಡ ರಂಜಿತ್ ಅವರ ಮನೆಯ ಅಂಗಳದಲ್ಲಿ ಮಲಗಿದ ಸಾಕು ನಾಯಿಗಳನ್ನು ಎತ್ತಿಕೊಂಡು ಹೋಗಿದೆ. ಪರಿಸರದಲ್ಕಿ ನಾಯಿ, ಬೆಕ್ಕು, ಕಣ್ಮರೆಯಾಗುತ್ತಿದೆ. ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

ಇಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೆಲ ಸಮಯದ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಬೋನ್ ಅಳವಡಿಸಿದರು ಪ್ರಯೋಜನವಾಗಲಿಲ್ಲ. ಚಿರತೆ ಕಾಟ ತಪ್ಪಿಸಲು ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya
error: Content is protected !!