23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ, ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಕಳೆದ ರಾತ್ರಿ ಮಜಲಡ್ಡ ರಂಜಿತ್ ಅವರ ಮನೆಯ ಅಂಗಳದಲ್ಲಿ ಮಲಗಿದ ಸಾಕು ನಾಯಿಗಳನ್ನು ಎತ್ತಿಕೊಂಡು ಹೋಗಿದೆ. ಪರಿಸರದಲ್ಕಿ ನಾಯಿ, ಬೆಕ್ಕು, ಕಣ್ಮರೆಯಾಗುತ್ತಿದೆ. ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

ಇಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೆಲ ಸಮಯದ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಬೋನ್ ಅಳವಡಿಸಿದರು ಪ್ರಯೋಜನವಾಗಲಿಲ್ಲ. ಚಿರತೆ ಕಾಟ ತಪ್ಪಿಸಲು ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!