25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

ಬಳಂಜ: ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಪರಿಸರದಲ್ಲಿ ದಿನದಿಂದ ದಿನಕ್ಕೆ ಚಿರತೆ ಕಾಟ ಜಾಸ್ತಿಯಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲವು ಸಮಯದ ಹಿಂದೆ ಬಳಂಜ, ನಿಟ್ಟಡ್ಕ, ಪುಣ್ಕೆದೊಟ್ಟು ಪರಿಸರದಲ್ಲಿ ಸಾಕು ಪ್ರಾಣಿಗಳಾದ ಗೋವು, ನಾಯಿ, ಬೆಕ್ಕು, ಕೋಳಿಗಳ ಮೇಲೆ ದಾಳಿಗಳಾಗಿದ್ದು‌ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಕೂಡಲೇ ಉಪವಲಯರಣ್ಯಾಧಿಕಾರಿ‌ ತಕ್ಷಣ ಸ್ಪಂದಿಸಿ ಚಿರತೆ ಪತ್ತೆಗಾಗಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಪರಿಸರದಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಕಳೆದ ರಾತ್ರಿ ಮಜಲಡ್ಡ ರಂಜಿತ್ ಅವರ ಮನೆಯ ಅಂಗಳದಲ್ಲಿ ಮಲಗಿದ ಸಾಕು ನಾಯಿಗಳನ್ನು ಎತ್ತಿಕೊಂಡು ಹೋಗಿದೆ. ಪರಿಸರದಲ್ಕಿ ನಾಯಿ, ಬೆಕ್ಕು, ಕಣ್ಮರೆಯಾಗುತ್ತಿದೆ. ಇದರಿಂದ ಊರಲ್ಲಿ ಚಿರತೆಯ ಚಿಂತೆ ಹೆಚ್ಚಾಗಿ ಜನರು ರಾತ್ರಿ ಓಡಾಡಲು ಭಯಪಡುವ ಸಮಸ್ಯೆ ಸಂಭವಿಸಿದೆ.

ಇಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೆಲ ಸಮಯದ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆಗೆ ಬೋನ್ ಅಳವಡಿಸಿದರು ಪ್ರಯೋಜನವಾಗಲಿಲ್ಲ. ಚಿರತೆ ಕಾಟ ತಪ್ಪಿಸಲು ಇಲಾಖೆಯವರು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya
error: Content is protected !!