22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಮಡಂತ್ಯಾರು: ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಮಾಲಾಡಿ ಮಡಂತ್ಯಾರು ಇದರ ಮಹಾಸಭೆಯು ಎಸ್ ಕೆ ಸಭಾಭವನ ಮಾಲಾಡಿ ಇದರಲ್ಲಿ ಸಂಘದ ಅಧ್ಯಕ್ಷ ಮೊಹಮ್ಮದ್ ರಫೀಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆ ಉಪನಿರೀಕ್ಷಕ ನಂದಕುಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪದ್ಮನಾಥ್ ಸಾಲಿಯಾನ್, ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಹಾಗೂ ಕೆಪಿಸಿಸಿ ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಘು ಕೆ ಆರ್ ಬಂಗೇರ, ಬಿ ಎಂ ಆಟೋ ರಿಕ್ಷಾ ಮಾಲಕರ ಸಂಘದ ಮಾಜಿ ಅಧ್ಯಕ್ಷ ಸುಲೇಮಾನ್ ಮುಂಡಾಡಿ, ಇಲ್ಯಾಸ್ ಬಸವನಗುಡಿ ಸ್ವಾಗತಿಸಿದರು. ಶೇಕ್ ಸುಲೇಮಾನ್ ವಾರ್ಷಿಕ ವರದಿಯನ್ನು ಓದಿ ಹೇಳಿದರು.

ಈ ಸಂದರ್ಭದಲ್ಲಿ 2024ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು, ಅಧ್ಯಕ್ಷರಾಗಿ ಶೇಕ್ ಸುಲೇಮಾನ್ ಮಾಲಾಡಿ, ಉಪಾಧ್ಯಕ್ಷರಾಗಿ ರಮೇಶ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಇಲ್ಯಾಸ್ ಬಸವನಗುಡಿ, ಜೊತೆ ಕಾರ್ಯದರ್ಶಿಯಾಗಿ ಸಮೀರ್ ಯುಬಿ, ಖಜಾಂಜಿಯಾಗಿ ಸುರೇಶ್ ಬಳ್ಳಮಂಜ, ಲೆಕ್ಕಪರಿಶೋಧಕರಾಗಿ ಕಲಂದರ್ ಶಾಪಿ ಪಣಕಜೆ, ಜೊತೆ ಲೆಕ್ಕ ಪರಿಶೋಧಕರಾಗಿ ಸಿರಾಜ್ ಬಸವನಗುಡಿ, ಸಲಹೆಗಾರರಾಗಿ ರಘು ಕೆ ಆರ್ ಬಂಗೇರ ಹಾಗೂ ಸುಲೇಮಾನ್ ಮುಂಡಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಮೀನ್ ಮಾಲಾಡಿ, ಸುದೀಪ್ ಅಬ್ದುಲ್ ರಜಾಕ್, ಇರ್ಫಾನ್ ರಫೀಕ್ ಮಾಲಾಡಿ, ನಾಸಿರ್ ಬಂಗೇರ್ ಕಟ್ಟೆ, ಅಜೀಜ್ ಮಾಲಾಡಿ, ಅಶ್ರಫ್ ಕೊಡಿಯಾಲ್, ಅಶೋಕ್ ಬಂಗಾರಕಟ್ಟೆ, ಆತಿಫ್ ಅಲ್ತಾಫ್ ಇವರನ್ನ ಆಯ್ಕೆ ಮಾಡಲಾಯಿತು.

Related posts

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!