32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಮಡಂತ್ಯಾರು: ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಮಾಲಾಡಿ ಮಡಂತ್ಯಾರು ಇದರ ಮಹಾಸಭೆಯು ಎಸ್ ಕೆ ಸಭಾಭವನ ಮಾಲಾಡಿ ಇದರಲ್ಲಿ ಸಂಘದ ಅಧ್ಯಕ್ಷ ಮೊಹಮ್ಮದ್ ರಫೀಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆ ಉಪನಿರೀಕ್ಷಕ ನಂದಕುಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪದ್ಮನಾಥ್ ಸಾಲಿಯಾನ್, ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಹಾಗೂ ಕೆಪಿಸಿಸಿ ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಘು ಕೆ ಆರ್ ಬಂಗೇರ, ಬಿ ಎಂ ಆಟೋ ರಿಕ್ಷಾ ಮಾಲಕರ ಸಂಘದ ಮಾಜಿ ಅಧ್ಯಕ್ಷ ಸುಲೇಮಾನ್ ಮುಂಡಾಡಿ, ಇಲ್ಯಾಸ್ ಬಸವನಗುಡಿ ಸ್ವಾಗತಿಸಿದರು. ಶೇಕ್ ಸುಲೇಮಾನ್ ವಾರ್ಷಿಕ ವರದಿಯನ್ನು ಓದಿ ಹೇಳಿದರು.

ಈ ಸಂದರ್ಭದಲ್ಲಿ 2024ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು, ಅಧ್ಯಕ್ಷರಾಗಿ ಶೇಕ್ ಸುಲೇಮಾನ್ ಮಾಲಾಡಿ, ಉಪಾಧ್ಯಕ್ಷರಾಗಿ ರಮೇಶ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಇಲ್ಯಾಸ್ ಬಸವನಗುಡಿ, ಜೊತೆ ಕಾರ್ಯದರ್ಶಿಯಾಗಿ ಸಮೀರ್ ಯುಬಿ, ಖಜಾಂಜಿಯಾಗಿ ಸುರೇಶ್ ಬಳ್ಳಮಂಜ, ಲೆಕ್ಕಪರಿಶೋಧಕರಾಗಿ ಕಲಂದರ್ ಶಾಪಿ ಪಣಕಜೆ, ಜೊತೆ ಲೆಕ್ಕ ಪರಿಶೋಧಕರಾಗಿ ಸಿರಾಜ್ ಬಸವನಗುಡಿ, ಸಲಹೆಗಾರರಾಗಿ ರಘು ಕೆ ಆರ್ ಬಂಗೇರ ಹಾಗೂ ಸುಲೇಮಾನ್ ಮುಂಡಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಮೀನ್ ಮಾಲಾಡಿ, ಸುದೀಪ್ ಅಬ್ದುಲ್ ರಜಾಕ್, ಇರ್ಫಾನ್ ರಫೀಕ್ ಮಾಲಾಡಿ, ನಾಸಿರ್ ಬಂಗೇರ್ ಕಟ್ಟೆ, ಅಜೀಜ್ ಮಾಲಾಡಿ, ಅಶ್ರಫ್ ಕೊಡಿಯಾಲ್, ಅಶೋಕ್ ಬಂಗಾರಕಟ್ಟೆ, ಆತಿಫ್ ಅಲ್ತಾಫ್ ಇವರನ್ನ ಆಯ್ಕೆ ಮಾಡಲಾಯಿತು.

Related posts

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya
error: Content is protected !!