23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಮಡಂತ್ಯಾರು: ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಮಾಲಾಡಿ ಮಡಂತ್ಯಾರು ಇದರ ಮಹಾಸಭೆಯು ಎಸ್ ಕೆ ಸಭಾಭವನ ಮಾಲಾಡಿ ಇದರಲ್ಲಿ ಸಂಘದ ಅಧ್ಯಕ್ಷ ಮೊಹಮ್ಮದ್ ರಫೀಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆ ಉಪನಿರೀಕ್ಷಕ ನಂದಕುಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪದ್ಮನಾಥ್ ಸಾಲಿಯಾನ್, ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಹಾಗೂ ಕೆಪಿಸಿಸಿ ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಘು ಕೆ ಆರ್ ಬಂಗೇರ, ಬಿ ಎಂ ಆಟೋ ರಿಕ್ಷಾ ಮಾಲಕರ ಸಂಘದ ಮಾಜಿ ಅಧ್ಯಕ್ಷ ಸುಲೇಮಾನ್ ಮುಂಡಾಡಿ, ಇಲ್ಯಾಸ್ ಬಸವನಗುಡಿ ಸ್ವಾಗತಿಸಿದರು. ಶೇಕ್ ಸುಲೇಮಾನ್ ವಾರ್ಷಿಕ ವರದಿಯನ್ನು ಓದಿ ಹೇಳಿದರು.

ಈ ಸಂದರ್ಭದಲ್ಲಿ 2024ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು, ಅಧ್ಯಕ್ಷರಾಗಿ ಶೇಕ್ ಸುಲೇಮಾನ್ ಮಾಲಾಡಿ, ಉಪಾಧ್ಯಕ್ಷರಾಗಿ ರಮೇಶ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಇಲ್ಯಾಸ್ ಬಸವನಗುಡಿ, ಜೊತೆ ಕಾರ್ಯದರ್ಶಿಯಾಗಿ ಸಮೀರ್ ಯುಬಿ, ಖಜಾಂಜಿಯಾಗಿ ಸುರೇಶ್ ಬಳ್ಳಮಂಜ, ಲೆಕ್ಕಪರಿಶೋಧಕರಾಗಿ ಕಲಂದರ್ ಶಾಪಿ ಪಣಕಜೆ, ಜೊತೆ ಲೆಕ್ಕ ಪರಿಶೋಧಕರಾಗಿ ಸಿರಾಜ್ ಬಸವನಗುಡಿ, ಸಲಹೆಗಾರರಾಗಿ ರಘು ಕೆ ಆರ್ ಬಂಗೇರ ಹಾಗೂ ಸುಲೇಮಾನ್ ಮುಂಡಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಮೀನ್ ಮಾಲಾಡಿ, ಸುದೀಪ್ ಅಬ್ದುಲ್ ರಜಾಕ್, ಇರ್ಫಾನ್ ರಫೀಕ್ ಮಾಲಾಡಿ, ನಾಸಿರ್ ಬಂಗೇರ್ ಕಟ್ಟೆ, ಅಜೀಜ್ ಮಾಲಾಡಿ, ಅಶ್ರಫ್ ಕೊಡಿಯಾಲ್, ಅಶೋಕ್ ಬಂಗಾರಕಟ್ಟೆ, ಆತಿಫ್ ಅಲ್ತಾಫ್ ಇವರನ್ನ ಆಯ್ಕೆ ಮಾಡಲಾಯಿತು.

Related posts

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!