23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

ಉಜಿರೆ : ಇಂದು ಪ್ರಪಂಚದಾದ್ಯಂತ ಆಹಾರ ವ್ಯರ್ಥತೆ ಹೆಚ್ಚಾಗುತ್ತಿದೆ. ಇಂದೂ ಸಹ ಆಹಾರ ಇಲ್ಲದೆ ಬಳಲುವವರು ಅನೇಕರಿದ್ದಾರೆ. ಅಂತವರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಈ ಮೂಲಕ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಆಗಬೇಕಾಗಿದೆ. ಇದಕ್ಕಾಗಿ ಯುವ ಜನತೆ ಇಂತಹ ಜಾಗೃತಿಯ ಕೆಲಸ ಮಾಡಬೇಕಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ. ಎ. ಜಯಕುಮಾರ ಶೆಟ್ಟಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಯೋಜಿಸಿದ ಜಾಗೃತಿ ಸಪ್ತಾಹ ಉದ್ಘಾಟನೆ ಮಾಡಿ ಆಹಾರ ತ್ಯಾಜ್ಯ ಜಾಗೃತಿ ಕುರಿತು ಮಾತನಾಡಿದರು.

ಜಾಗ್ರತೆಯಿಂದ ಇರುವವರಿಗೆ ಭಯ ಎಂಬುದು ಇರುವುದಿಲ್ಲ. ಯಾವಾಗಲೂ ಆತ್ಮವಿಶ್ವಾಸ ಇರಬೇಕು. ನಮ್ಮ ತಪ್ಪನ್ನು ನಾವೇ ಗುರುತಿಸಿಕೊಳ್ಳಬೇಕು. ಅದರೊಂದಿಗೆ ಇಂತಹ ಜಾಗೃತಿ ಕಾರ್ಯಗಳು ಹೆಚ್ಚಾಗಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ಯುವ ಜನತೆ ಸಮಾಜದ ಅನೇಕ ಸಮಸ್ಯೆಗಳಿಗೆ ಓಗೊಟ್ಟು ಜಾಗೃತಿ ಮಾಡುವ ಕಾರ್ಯ ಮಾಡಬೇಕು. ಇದರಿಂದ ಸಮಾಜದೊಂದಿಗೆ ದೇಶದ ಸುಧಾರಣೆ ಸಾಧ್ಯ ಎಂದು ತಿಳಿಸಿದರು.

ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಶುಭಾಶಂಸನೆ ಮಾಡಿದರು. ರಾ.ಸೇ.ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ದಿವ್ಯಶ್ರೀ ಸ್ವಾಗತಿಸಿದರು. ಪಲ್ಲವಿ ನಿರೂಪಿಸಿ , ಶಶಾಂಕ್ ವಂದಿಸಿದರು.

Related posts

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
error: Content is protected !!