25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

ಉಜಿರೆ : ಇಂದು ಪ್ರಪಂಚದಾದ್ಯಂತ ಆಹಾರ ವ್ಯರ್ಥತೆ ಹೆಚ್ಚಾಗುತ್ತಿದೆ. ಇಂದೂ ಸಹ ಆಹಾರ ಇಲ್ಲದೆ ಬಳಲುವವರು ಅನೇಕರಿದ್ದಾರೆ. ಅಂತವರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಈ ಮೂಲಕ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಆಗಬೇಕಾಗಿದೆ. ಇದಕ್ಕಾಗಿ ಯುವ ಜನತೆ ಇಂತಹ ಜಾಗೃತಿಯ ಕೆಲಸ ಮಾಡಬೇಕಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ. ಎ. ಜಯಕುಮಾರ ಶೆಟ್ಟಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಯೋಜಿಸಿದ ಜಾಗೃತಿ ಸಪ್ತಾಹ ಉದ್ಘಾಟನೆ ಮಾಡಿ ಆಹಾರ ತ್ಯಾಜ್ಯ ಜಾಗೃತಿ ಕುರಿತು ಮಾತನಾಡಿದರು.

ಜಾಗ್ರತೆಯಿಂದ ಇರುವವರಿಗೆ ಭಯ ಎಂಬುದು ಇರುವುದಿಲ್ಲ. ಯಾವಾಗಲೂ ಆತ್ಮವಿಶ್ವಾಸ ಇರಬೇಕು. ನಮ್ಮ ತಪ್ಪನ್ನು ನಾವೇ ಗುರುತಿಸಿಕೊಳ್ಳಬೇಕು. ಅದರೊಂದಿಗೆ ಇಂತಹ ಜಾಗೃತಿ ಕಾರ್ಯಗಳು ಹೆಚ್ಚಾಗಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ಯುವ ಜನತೆ ಸಮಾಜದ ಅನೇಕ ಸಮಸ್ಯೆಗಳಿಗೆ ಓಗೊಟ್ಟು ಜಾಗೃತಿ ಮಾಡುವ ಕಾರ್ಯ ಮಾಡಬೇಕು. ಇದರಿಂದ ಸಮಾಜದೊಂದಿಗೆ ದೇಶದ ಸುಧಾರಣೆ ಸಾಧ್ಯ ಎಂದು ತಿಳಿಸಿದರು.

ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಶುಭಾಶಂಸನೆ ಮಾಡಿದರು. ರಾ.ಸೇ.ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ದಿವ್ಯಶ್ರೀ ಸ್ವಾಗತಿಸಿದರು. ಪಲ್ಲವಿ ನಿರೂಪಿಸಿ , ಶಶಾಂಕ್ ವಂದಿಸಿದರು.

Related posts

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!