25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

ಉಜಿರೆ : ಇಂದು ಪ್ರಪಂಚದಾದ್ಯಂತ ಆಹಾರ ವ್ಯರ್ಥತೆ ಹೆಚ್ಚಾಗುತ್ತಿದೆ. ಇಂದೂ ಸಹ ಆಹಾರ ಇಲ್ಲದೆ ಬಳಲುವವರು ಅನೇಕರಿದ್ದಾರೆ. ಅಂತವರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಈ ಮೂಲಕ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಆಗಬೇಕಾಗಿದೆ. ಇದಕ್ಕಾಗಿ ಯುವ ಜನತೆ ಇಂತಹ ಜಾಗೃತಿಯ ಕೆಲಸ ಮಾಡಬೇಕಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ. ಎ. ಜಯಕುಮಾರ ಶೆಟ್ಟಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಯೋಜಿಸಿದ ಜಾಗೃತಿ ಸಪ್ತಾಹ ಉದ್ಘಾಟನೆ ಮಾಡಿ ಆಹಾರ ತ್ಯಾಜ್ಯ ಜಾಗೃತಿ ಕುರಿತು ಮಾತನಾಡಿದರು.

ಜಾಗ್ರತೆಯಿಂದ ಇರುವವರಿಗೆ ಭಯ ಎಂಬುದು ಇರುವುದಿಲ್ಲ. ಯಾವಾಗಲೂ ಆತ್ಮವಿಶ್ವಾಸ ಇರಬೇಕು. ನಮ್ಮ ತಪ್ಪನ್ನು ನಾವೇ ಗುರುತಿಸಿಕೊಳ್ಳಬೇಕು. ಅದರೊಂದಿಗೆ ಇಂತಹ ಜಾಗೃತಿ ಕಾರ್ಯಗಳು ಹೆಚ್ಚಾಗಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ಯುವ ಜನತೆ ಸಮಾಜದ ಅನೇಕ ಸಮಸ್ಯೆಗಳಿಗೆ ಓಗೊಟ್ಟು ಜಾಗೃತಿ ಮಾಡುವ ಕಾರ್ಯ ಮಾಡಬೇಕು. ಇದರಿಂದ ಸಮಾಜದೊಂದಿಗೆ ದೇಶದ ಸುಧಾರಣೆ ಸಾಧ್ಯ ಎಂದು ತಿಳಿಸಿದರು.

ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಶುಭಾಶಂಸನೆ ಮಾಡಿದರು. ರಾ.ಸೇ.ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ದಿವ್ಯಶ್ರೀ ಸ್ವಾಗತಿಸಿದರು. ಪಲ್ಲವಿ ನಿರೂಪಿಸಿ , ಶಶಾಂಕ್ ವಂದಿಸಿದರು.

Related posts

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya
error: Content is protected !!