25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವೇಣೂರು ಇದರ ವತಿಯಿಂದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ಮಹೋತ್ಸವದ ‘ಶ್ರೀಮುಖ ಪತ್ರಿಕೆ’ಯ ಬಿಡುಗಡೆ ಸಮಾರಂಭ ಮೂಡುಬಿದಿರೆ ಶ್ರೀ ಜೈನಮಠದ ಪರಮಪೂಜ್ಯ ‘ಭಾರತಭೂಷಣ’ ಡಾ||ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜೀಯವರ ದಿವ್ಯ ಉಪಸ್ಥಿತಿಯಲ್ಲಿ ಡಿ.27ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜರುಗಿತು.


ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜೀಯವರು ದೀಪ ಪ್ರಜ್ವಲಿಸಿದರು. ಶ್ರೀಮುಖ ಪತ್ರಿಕೆಯನ್ನು ಮಹಾರಾಷ್ಟ್ರ ನಾಸಿಕ್‌ನ ರವೀಂದ್ರ ಪಾಟೀಲ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮಹಾಮಸ್ತಕಾಭೀಷೇಕ ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ ಅಜಿಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಹಾಮಸ್ತಕಾಭೀಷೇಕ ಸಮಿತಿ ಉಪಾಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್,
ಎಕ್ಸೆಲ್ ಪ.ಪೂ.ಕಾಲೇಜು ಗುರುವಾಯನಕೆರೆಯ ಅಧ್ಯಕ್ಷ ಬಿ. ಸುಮಂತ್ ಕುಮಾರ್ ಜೈನ್ ಭಾಗವಹಿಸಿದ್ದರು.

ಶ್ರೀ ಮತಿ ಸುಪ್ರೀಯ ಪ್ರಾಥ೯ನೆ ಬಳಿಕ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ ಕುಮಾರ್ ಇಂದ್ರ ಸ್ವಾಗತಿಸಿದರು. ಕೆ.ಹೇಮರಾಜ ಬೆಳ್ಳಿಬೀಡು ಮೆಲೋಡಿ, ಶ್ರೀಮತಿ ಮಧುರಾ ಅಜಿಲ ಅಳದಂಗಡಿ ಅರಮನೆ, ಶ್ರೀಮತಿ ಪ್ರಸನ್ನ ಆರ್.ಹೆಗ್ಡೆ ಪಡ್ಡಂದಡ್ಕ, ಎಂ.ಜೀವಂದರ್ ಕುಮಾರ್ ಪಡ್ಯೋಡಿಗುತ್ತು, ಯುವರಾಜ್ ಜೈನ್ ಎಕ್ಸಲೆಂಟ್ ಕಲ್ಲಬೆಟ್ಟು,, ಡಾ. ಶಾಂತಿಪ್ರಸಾದ್ ವೇಣೂರು, ಸ್ವಸ್ತಿಕ್ ಜೈನ್ ಬುಳೇಕ್ಕಾರ ಬೀಡು ಸ್ವಾಮೀಜಿ ಹಾಗೂ ಅತಿಥಿ -ಗಣ್ಯರನ್ನು ಗೌರವಿಸಿದರು.
ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯದರ್ಶಿ ಮಹಾವೀರ್ ಜೈನ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
error: Content is protected !!