30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವೇಣೂರು ಇದರ ವತಿಯಿಂದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ಮಹೋತ್ಸವದ ‘ಶ್ರೀಮುಖ ಪತ್ರಿಕೆ’ಯ ಬಿಡುಗಡೆ ಸಮಾರಂಭ ಮೂಡುಬಿದಿರೆ ಶ್ರೀ ಜೈನಮಠದ ಪರಮಪೂಜ್ಯ ‘ಭಾರತಭೂಷಣ’ ಡಾ||ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜೀಯವರ ದಿವ್ಯ ಉಪಸ್ಥಿತಿಯಲ್ಲಿ ಡಿ.27ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜರುಗಿತು.


ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜೀಯವರು ದೀಪ ಪ್ರಜ್ವಲಿಸಿದರು. ಶ್ರೀಮುಖ ಪತ್ರಿಕೆಯನ್ನು ಮಹಾರಾಷ್ಟ್ರ ನಾಸಿಕ್‌ನ ರವೀಂದ್ರ ಪಾಟೀಲ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮಹಾಮಸ್ತಕಾಭೀಷೇಕ ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ ಅಜಿಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಹಾಮಸ್ತಕಾಭೀಷೇಕ ಸಮಿತಿ ಉಪಾಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್,
ಎಕ್ಸೆಲ್ ಪ.ಪೂ.ಕಾಲೇಜು ಗುರುವಾಯನಕೆರೆಯ ಅಧ್ಯಕ್ಷ ಬಿ. ಸುಮಂತ್ ಕುಮಾರ್ ಜೈನ್ ಭಾಗವಹಿಸಿದ್ದರು.

ಶ್ರೀ ಮತಿ ಸುಪ್ರೀಯ ಪ್ರಾಥ೯ನೆ ಬಳಿಕ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ ಕುಮಾರ್ ಇಂದ್ರ ಸ್ವಾಗತಿಸಿದರು. ಕೆ.ಹೇಮರಾಜ ಬೆಳ್ಳಿಬೀಡು ಮೆಲೋಡಿ, ಶ್ರೀಮತಿ ಮಧುರಾ ಅಜಿಲ ಅಳದಂಗಡಿ ಅರಮನೆ, ಶ್ರೀಮತಿ ಪ್ರಸನ್ನ ಆರ್.ಹೆಗ್ಡೆ ಪಡ್ಡಂದಡ್ಕ, ಎಂ.ಜೀವಂದರ್ ಕುಮಾರ್ ಪಡ್ಯೋಡಿಗುತ್ತು, ಯುವರಾಜ್ ಜೈನ್ ಎಕ್ಸಲೆಂಟ್ ಕಲ್ಲಬೆಟ್ಟು,, ಡಾ. ಶಾಂತಿಪ್ರಸಾದ್ ವೇಣೂರು, ಸ್ವಸ್ತಿಕ್ ಜೈನ್ ಬುಳೇಕ್ಕಾರ ಬೀಡು ಸ್ವಾಮೀಜಿ ಹಾಗೂ ಅತಿಥಿ -ಗಣ್ಯರನ್ನು ಗೌರವಿಸಿದರು.
ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯದರ್ಶಿ ಮಹಾವೀರ್ ಜೈನ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya
error: Content is protected !!