September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

ವೇಣೂರು: ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವೇಣೂರು ಇದರ ವತಿಯಿಂದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ಮಹೋತ್ಸವದ ‘ಶ್ರೀಮುಖ ಪತ್ರಿಕೆ’ಯ ಬಿಡುಗಡೆ ಸಮಾರಂಭ ಮೂಡುಬಿದಿರೆ ಶ್ರೀ ಜೈನಮಠದ ಪರಮಪೂಜ್ಯ ‘ಭಾರತಭೂಷಣ’ ಡಾ||ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜೀಯವರ ದಿವ್ಯ ಉಪಸ್ಥಿತಿಯಲ್ಲಿ ಡಿ.27ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜರುಗಿತು.


ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜೀಯವರು ದೀಪ ಪ್ರಜ್ವಲಿಸಿದರು. ಶ್ರೀಮುಖ ಪತ್ರಿಕೆಯನ್ನು ಮಹಾರಾಷ್ಟ್ರ ನಾಸಿಕ್‌ನ ರವೀಂದ್ರ ಪಾಟೀಲ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮಹಾಮಸ್ತಕಾಭೀಷೇಕ ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ ಅಜಿಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಹಾಮಸ್ತಕಾಭೀಷೇಕ ಸಮಿತಿ ಉಪಾಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್,
ಎಕ್ಸೆಲ್ ಪ.ಪೂ.ಕಾಲೇಜು ಗುರುವಾಯನಕೆರೆಯ ಅಧ್ಯಕ್ಷ ಬಿ. ಸುಮಂತ್ ಕುಮಾರ್ ಜೈನ್ ಭಾಗವಹಿಸಿದ್ದರು.

ಶ್ರೀ ಮತಿ ಸುಪ್ರೀಯ ಪ್ರಾಥ೯ನೆ ಬಳಿಕ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ ಕುಮಾರ್ ಇಂದ್ರ ಸ್ವಾಗತಿಸಿದರು. ಕೆ.ಹೇಮರಾಜ ಬೆಳ್ಳಿಬೀಡು ಮೆಲೋಡಿ, ಶ್ರೀಮತಿ ಮಧುರಾ ಅಜಿಲ ಅಳದಂಗಡಿ ಅರಮನೆ, ಶ್ರೀಮತಿ ಪ್ರಸನ್ನ ಆರ್.ಹೆಗ್ಡೆ ಪಡ್ಡಂದಡ್ಕ, ಎಂ.ಜೀವಂದರ್ ಕುಮಾರ್ ಪಡ್ಯೋಡಿಗುತ್ತು, ಯುವರಾಜ್ ಜೈನ್ ಎಕ್ಸಲೆಂಟ್ ಕಲ್ಲಬೆಟ್ಟು,, ಡಾ. ಶಾಂತಿಪ್ರಸಾದ್ ವೇಣೂರು, ಸ್ವಸ್ತಿಕ್ ಜೈನ್ ಬುಳೇಕ್ಕಾರ ಬೀಡು ಸ್ವಾಮೀಜಿ ಹಾಗೂ ಅತಿಥಿ -ಗಣ್ಯರನ್ನು ಗೌರವಿಸಿದರು.
ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯದರ್ಶಿ ಮಹಾವೀರ್ ಜೈನ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya
error: Content is protected !!