32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

ನಾವೂರು: ನಾವೂರು ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವವು ಡಿ.27 ರಂದು ಶ್ರೀ ಗುರುಕೃಪಾ ಭಜನಾ ಮಂದಿರದ ವಠಾರದಲ್ಲಿ ನಾವೂರು ಶ್ರೀ ಸೇಸಪ್ಪ ಗುರುಸ್ವಾಮಿ ಮತ್ತು ತೋಟತ್ತಾಡಿ ರವಿ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದಕ್ಷಿಣ ಕನ್ನಡ ಇವರಿಂದ “ಹರಿವರಾಸನಂ ಗೀತೆಯ ಶತಾಬ್ಧಿ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಎ. ರವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಪಂದಳ ರಾಜರಾಗಿರುವ ಶಶಿಕುಮಾರ ವರ್ಮ ಹಾಗೂ ಅವರ ಧರ್ಮಪತ್ನಿ ಶ್ರೀ ಕ್ಷೇತ್ರ ಶಬರಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ. ಜಿಲ್ಲೆಯ ಅಧ್ಯಕ್ಷ ಗಣೇಶ್ ಪೊದುವಾಳ್, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಉದ್ಯಮಿ ಶಶಿಧರ ಬಿ. ಶೆಟ್ಟಿ ನವಶಕ್ತಿ ಬರೋಡ, ತಜಂಪಾಡಿ ಆರ್.ಆರ್ ಎಸ್ ಮುಖಂಡ ಸುಬ್ರಹ್ಮಣ್ಯ ಭಟ್ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯನ್, ಸಿ ಎ ಬ್ಯಾಂಕ್ ಬಂಗಾಡಿ ನಿರ್ದೇಶಕ ಎ.ಬಿ. ಉಮೇಶ್ ಹತ್ಯಡ್ಕ, ಸಮಿತಿ ಅಧ್ಯಕ್ಷ ಶ್ರೀಧರ ಗುಡಿಗಾರ, ಸಮಿತಿಯ ಗೌರವಾಧ್ಯಕ್ಷ ಕುಂಜಿರ ಗುರುಸ್ವಾಮಿ ಭಾಗವಹಿಸಿದರು.

ಬೆಳಿಗ್ಗೆ ಗಣಹೋಮ, ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ “ಶಿವದೂತೆ ಗುಳಿಗೆ” ತುಳು ಯಕ್ಷಗಾನ ಬಯಲಾಟ ನಡೆಯಿತು.

ಇಂದು ಬೆಳಿಗ್ಗೆ ದೇವಿದರ್ಶನ, 4 ಗಂಟೆಗೆ ಅಗ್ನಿ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಡಾ| ಪ್ರದೀಪ್ ಎ ಸ್ವಾಗತಿಸಿ, ಎಸ್.ಡಿ.ಎಮ್ ಕಾಲೇಜು ಉಪನ್ಯಾಸಕ ಶ್ರೀಧರ ಭಟ್ ನಿರೂಪಿಸಿದರು.

Related posts

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya
error: Content is protected !!