July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

ಬೆಳ್ತಂಗಡಿ: ಸರಕಾರವು 2022-23ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದರು ರಾಜ್ಯ ಪ್ರಶಸ್ತಿ ವಿಜೇತರೂ ಆಗಿರುವ ಅರುವ ಕೊರಗಪ್ಪ ಶೆಟ್ಟಿ (83) ಅವರನ್ನು ಆಯ್ಕೆಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಡಿ.27 ರಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

‘ಅರುವದವರು’ ಎಂದೇ ಪ್ರಸಿದ್ಧಿ ಅಳದಂಗಡಿಯ ಸುಬ್ಬಯ್ಯ ಶೆಟ್ಟಿ- ಕಾಂತಕ್ಕೆ ದಂಪತಿಯ ಹಿರಿಯ ಮಗನಾಗಿ 28 ನವೆಂಬರ್ 1940ರಲ್ಲಿ ಜನಿಸಿದ ‘ಅರುವದವರು’ ತಮ್ಮ 15ನೇ ವರ್ಷದಲ್ಲಿ ಕಟೀಲು ಮೇಳವನ್ನು ಸೇರಿಕೊಂಡು 6 ದಶಕಗಳಿಂದ ವಿವಿಧ ಮೇಳಗಳಲ್ಲಿ ಕಲಾಸೇವೆ ಮಾಡುತ್ತಿದ್ದಾರೆ.
‘ಗದಾಯುದ್ಧ’ದ ಕೌರವ, ‘ಕೋಟಿ ಚೆನ್ನಯ’ದ ಕೋಟಿ ಮುಂತಾದ ಪಾತ್ರಗಳ ನಿರ್ವಹಣೆಯಲ್ಲೂ ಪ್ರಸಿದ್ದಿ ಪಡೆದಿದ್ದಾರೆ. 3 ವರ್ಷ ಕಾಲ ಕಟೀಲು ಮೇಳ, ಕೂಡ್ಲು ಮೇಳದಲ್ಲಿ 2 ವರ್ಷ, ಕುಂಡಾವು ಮೇಳದಲ್ಲಿ 7 ವರ್ಷ, ಕದ್ರಿ, ಮಂಗಳಾ ದೇವಿ, ಎಡನೀರು ಮೇಳ ಗಳಲ್ಲಿ ಸೇವೆ ಸಲ್ಲಿಸಿ, 3 ದಶಕಳ ಕಾಲ ಕರ್ನಾಟಕ ಮೇಳದಲ್ಲಿ ತಾರಾ ಕಲಾವಿದರಾಗಿ ರಂಗಸ್ಥಳವನ್ನಾಳಿ ಪ್ರಸ್ತುತ ಬಪ್ಪನಾಡು ಮೇಳದಲ್ಲಿ ಮುಖ್ಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳಾದೇವಿ ಮೇಳದಲ್ಲಿ 12 ವರ್ಷ ಹಾಗೂ ಕರ್ನಾಟಕ ಯಕ್ಷಗಾನ ನಾಟಕ ಸಭಾದಲ್ಲಿ ಕನ್ನಡ ಯಕ್ಷಗಾನ ಪ್ರಸಂಗಗಳಲ್ಲಷ್ಟೇ ಅಲ್ಲದೇ ಹಲವಾರು ತುಳು ಪ್ರಸಂಗಗಳಲ್ಲೂ ಮುಖ್ಯ ಪಾತ್ರಗಳನ್ನು ನಿರ್ವಹಿಸಿ ಜನಮನ ಗೆದ್ದಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಡನೀರು ಪ್ರಶಸ್ತಿ, ಶ್ರೀ ಪೇಜಾವರ ಮಠದ ರಾಮವಿಠಲ ಪ್ರಶಸ್ತಿ, ಮಾಣಿಲ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗದ ಡಾ। ಬಿ.ಬಿ. ಶೆಟ್ಟಿ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ ಅರಸಿ ಬಂದಿವೆ. ಶ್ರೀ ಅರುವ ಕೊರಗಪ್ಪಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಮೂಲಕ ಕಲಾವಿದರಿಗೆ ನೆರವು, ಹೆಣ್ಣು ಮಕ್ಕಳ ಮದುವೆಗೆ ನೆರವು, ವಿದ್ಯಾರ್ಥಿ ವೇತನ ವಿತರಿಸುತ್ತ ಬಂದಿದ್ದಾರೆ.

Related posts

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
error: Content is protected !!