23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

ಬೆಳ್ತಂಗಡಿ: ಸರಕಾರವು 2022-23ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದರು ರಾಜ್ಯ ಪ್ರಶಸ್ತಿ ವಿಜೇತರೂ ಆಗಿರುವ ಅರುವ ಕೊರಗಪ್ಪ ಶೆಟ್ಟಿ (83) ಅವರನ್ನು ಆಯ್ಕೆಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಡಿ.27 ರಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

‘ಅರುವದವರು’ ಎಂದೇ ಪ್ರಸಿದ್ಧಿ ಅಳದಂಗಡಿಯ ಸುಬ್ಬಯ್ಯ ಶೆಟ್ಟಿ- ಕಾಂತಕ್ಕೆ ದಂಪತಿಯ ಹಿರಿಯ ಮಗನಾಗಿ 28 ನವೆಂಬರ್ 1940ರಲ್ಲಿ ಜನಿಸಿದ ‘ಅರುವದವರು’ ತಮ್ಮ 15ನೇ ವರ್ಷದಲ್ಲಿ ಕಟೀಲು ಮೇಳವನ್ನು ಸೇರಿಕೊಂಡು 6 ದಶಕಗಳಿಂದ ವಿವಿಧ ಮೇಳಗಳಲ್ಲಿ ಕಲಾಸೇವೆ ಮಾಡುತ್ತಿದ್ದಾರೆ.
‘ಗದಾಯುದ್ಧ’ದ ಕೌರವ, ‘ಕೋಟಿ ಚೆನ್ನಯ’ದ ಕೋಟಿ ಮುಂತಾದ ಪಾತ್ರಗಳ ನಿರ್ವಹಣೆಯಲ್ಲೂ ಪ್ರಸಿದ್ದಿ ಪಡೆದಿದ್ದಾರೆ. 3 ವರ್ಷ ಕಾಲ ಕಟೀಲು ಮೇಳ, ಕೂಡ್ಲು ಮೇಳದಲ್ಲಿ 2 ವರ್ಷ, ಕುಂಡಾವು ಮೇಳದಲ್ಲಿ 7 ವರ್ಷ, ಕದ್ರಿ, ಮಂಗಳಾ ದೇವಿ, ಎಡನೀರು ಮೇಳ ಗಳಲ್ಲಿ ಸೇವೆ ಸಲ್ಲಿಸಿ, 3 ದಶಕಳ ಕಾಲ ಕರ್ನಾಟಕ ಮೇಳದಲ್ಲಿ ತಾರಾ ಕಲಾವಿದರಾಗಿ ರಂಗಸ್ಥಳವನ್ನಾಳಿ ಪ್ರಸ್ತುತ ಬಪ್ಪನಾಡು ಮೇಳದಲ್ಲಿ ಮುಖ್ಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳಾದೇವಿ ಮೇಳದಲ್ಲಿ 12 ವರ್ಷ ಹಾಗೂ ಕರ್ನಾಟಕ ಯಕ್ಷಗಾನ ನಾಟಕ ಸಭಾದಲ್ಲಿ ಕನ್ನಡ ಯಕ್ಷಗಾನ ಪ್ರಸಂಗಗಳಲ್ಲಷ್ಟೇ ಅಲ್ಲದೇ ಹಲವಾರು ತುಳು ಪ್ರಸಂಗಗಳಲ್ಲೂ ಮುಖ್ಯ ಪಾತ್ರಗಳನ್ನು ನಿರ್ವಹಿಸಿ ಜನಮನ ಗೆದ್ದಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಡನೀರು ಪ್ರಶಸ್ತಿ, ಶ್ರೀ ಪೇಜಾವರ ಮಠದ ರಾಮವಿಠಲ ಪ್ರಶಸ್ತಿ, ಮಾಣಿಲ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗದ ಡಾ। ಬಿ.ಬಿ. ಶೆಟ್ಟಿ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ ಅರಸಿ ಬಂದಿವೆ. ಶ್ರೀ ಅರುವ ಕೊರಗಪ್ಪಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಮೂಲಕ ಕಲಾವಿದರಿಗೆ ನೆರವು, ಹೆಣ್ಣು ಮಕ್ಕಳ ಮದುವೆಗೆ ನೆರವು, ವಿದ್ಯಾರ್ಥಿ ವೇತನ ವಿತರಿಸುತ್ತ ಬಂದಿದ್ದಾರೆ.

Related posts

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!