ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಮಂಗಳೂರು ತಾಲೂಕು ಯೋಜನಾಧಿಕಾರಿ ಚನ್ನಕೇಶವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಗೈದರು.


ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರದ ಹಿನ್ನೆಲೆ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಕ್ಷೇತ್ರದಿಂದ ನಡೆಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಆತಿಥೇಯ ವಲಯದ ಅಧ್ಯಕ್ಷ ರವೀನ, ತಾಲೂಕು ಆಂತರಿಕ ಲೆಕ್ಕ ಪರಿಶೋಧಕ ದಿನೇಶ್, ಉಳ್ಳಾಲ ವಲಯದ ಮೇಲ್ವಿಚಾರಕಿ ಜಯಂತಿ, ಕೊಣಾಜೆ ವಲಯದ ಮೇಲ್ವಿಚಾರಕ ಮಾಧವ. ಎಂ. ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Comment

error: Content is protected !!