38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಜೈನ್ ಪೇಟೆ , ಬೆಳ್ತಂಗಡಿ ಇಲ್ಲಿಗೆ ಡಿ.30 ಶನಿವಾರ ಬೆಳಗ್ಗೆ 8 ಗಂಟೆಗೆ
ಪರಮಪೂಜ್ಯ ಪ್ರಜ್ಞಾಶ್ರಮಣ ಆಚಾರ್ಯ ಶ್ರೀದೇವನಂದಿ ಗುರುಗಳ ಪರಮ ಶಿಷ್ಯರಾದ ಯುಗಲಮುನಿವರ್ಯರಾದ ಪರಮಪೂಜ್ಯ 108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ ೧೦೮ ಶ್ರೀ ಅಮರಕೀರ್ತಿ ಮುನಿ ಮಹಾರಾಜರು ಭವ್ಯ ಮೆರವಣಿಗೆಯೊಂದಿಗೆ ಪುರಪ್ರವೇಶ ಗ್ಯೆಯಲ್ಲಿದ್ದಾರೆ.


ಮುನಿದ್ವಯರನ್ನು ಬೆಳ್ತಂಗಡಿ ನಗರದಿಂದ ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ವರೆಗೆ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಗುವುದು. ಇವರು ಮಧ್ಯಾಹ್ನದ 3:30 ರಿಂದ ಮಂಗಳ ಪ್ರವಚನವನ್ನು ಮಾಡಲಿರುವರು. ಅದೇ ರೀತಿ ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರಂದು ಬೆಳ್ತಂಗಡಿ ಬಸದಿಯಲ್ಲಿ ಮುನಿಗಳ ದಿವ್ಯ ಉಪಸ್ಥಿತಿ ಮತ್ತು ಮಾರ್ಗದರ್ಶನ ಅಡಿಯಲ್ಲಿ ವಿಶ್ವಶಾಂತಿ ಗಾಗಿ ಬೆಳಗ್ಗೆ 7:30 ರಿಂದ
ಶ್ರೀ ಶಾಂತಿಚಕ್ರ ಆರಾಧನಾ ವಿಧಾನವು ನಡೆಯಲಿದ್ದು ಇದೇ ದಿನ ಅಪರಾನ್ನ 1.30 ರಿಂದ 3:30ರವರೆಗೆ ಉಭಯ ಜಿಲ್ಲೆಯ ಸುಪ್ರಸಿದ್ಧ ಜೈನ್ ಸಂಗೀತ ಸಂಸ್ಥಾನ ಮೂಡಬಿದ್ರೆಯ ಶ್ರೀಮತಿ ಸೌಮ್ಯ ಮತ್ತು ಸರ್ವೇಶ್ ಜೈನ್ ಇವರಿಂದ ಜೈನ್ ಸಂಗೀತ ಸುಧೆ ವಿಶೇಷ ಗಾನ ಲಹರಿ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ಅಪರಾಹ್ನ 3:30 ರಿಂದ ಮುನಿದ್ವಯರಿಂದ ದಿವ್ಯ ಮಂಗಲ ಪ್ರವಚನ ನಡೆಯಲಿದೆ ಎಂದು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ ಜಯವರ್ಮರಾಜ್ ಬಳ್ಳಾಲ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!