April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಜೈನ್ ಪೇಟೆ , ಬೆಳ್ತಂಗಡಿ ಇಲ್ಲಿಗೆ ಡಿ.30 ಶನಿವಾರ ಬೆಳಗ್ಗೆ 8 ಗಂಟೆಗೆ
ಪರಮಪೂಜ್ಯ ಪ್ರಜ್ಞಾಶ್ರಮಣ ಆಚಾರ್ಯ ಶ್ರೀದೇವನಂದಿ ಗುರುಗಳ ಪರಮ ಶಿಷ್ಯರಾದ ಯುಗಲಮುನಿವರ್ಯರಾದ ಪರಮಪೂಜ್ಯ 108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ ೧೦೮ ಶ್ರೀ ಅಮರಕೀರ್ತಿ ಮುನಿ ಮಹಾರಾಜರು ಭವ್ಯ ಮೆರವಣಿಗೆಯೊಂದಿಗೆ ಪುರಪ್ರವೇಶ ಗ್ಯೆಯಲ್ಲಿದ್ದಾರೆ.


ಮುನಿದ್ವಯರನ್ನು ಬೆಳ್ತಂಗಡಿ ನಗರದಿಂದ ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ವರೆಗೆ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಗುವುದು. ಇವರು ಮಧ್ಯಾಹ್ನದ 3:30 ರಿಂದ ಮಂಗಳ ಪ್ರವಚನವನ್ನು ಮಾಡಲಿರುವರು. ಅದೇ ರೀತಿ ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರಂದು ಬೆಳ್ತಂಗಡಿ ಬಸದಿಯಲ್ಲಿ ಮುನಿಗಳ ದಿವ್ಯ ಉಪಸ್ಥಿತಿ ಮತ್ತು ಮಾರ್ಗದರ್ಶನ ಅಡಿಯಲ್ಲಿ ವಿಶ್ವಶಾಂತಿ ಗಾಗಿ ಬೆಳಗ್ಗೆ 7:30 ರಿಂದ
ಶ್ರೀ ಶಾಂತಿಚಕ್ರ ಆರಾಧನಾ ವಿಧಾನವು ನಡೆಯಲಿದ್ದು ಇದೇ ದಿನ ಅಪರಾನ್ನ 1.30 ರಿಂದ 3:30ರವರೆಗೆ ಉಭಯ ಜಿಲ್ಲೆಯ ಸುಪ್ರಸಿದ್ಧ ಜೈನ್ ಸಂಗೀತ ಸಂಸ್ಥಾನ ಮೂಡಬಿದ್ರೆಯ ಶ್ರೀಮತಿ ಸೌಮ್ಯ ಮತ್ತು ಸರ್ವೇಶ್ ಜೈನ್ ಇವರಿಂದ ಜೈನ್ ಸಂಗೀತ ಸುಧೆ ವಿಶೇಷ ಗಾನ ಲಹರಿ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ಅಪರಾಹ್ನ 3:30 ರಿಂದ ಮುನಿದ್ವಯರಿಂದ ದಿವ್ಯ ಮಂಗಲ ಪ್ರವಚನ ನಡೆಯಲಿದೆ ಎಂದು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ ಜಯವರ್ಮರಾಜ್ ಬಳ್ಳಾಲ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
error: Content is protected !!