22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

ಬೆಳ್ತಂಗಡಿ: ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಜೈನ್ ಪೇಟೆ , ಬೆಳ್ತಂಗಡಿ ಇಲ್ಲಿಗೆ ಡಿ.30 ಶನಿವಾರ ಬೆಳಗ್ಗೆ 8 ಗಂಟೆಗೆ
ಪರಮಪೂಜ್ಯ ಪ್ರಜ್ಞಾಶ್ರಮಣ ಆಚಾರ್ಯ ಶ್ರೀದೇವನಂದಿ ಗುರುಗಳ ಪರಮ ಶಿಷ್ಯರಾದ ಯುಗಲಮುನಿವರ್ಯರಾದ ಪರಮಪೂಜ್ಯ 108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ ೧೦೮ ಶ್ರೀ ಅಮರಕೀರ್ತಿ ಮುನಿ ಮಹಾರಾಜರು ಭವ್ಯ ಮೆರವಣಿಗೆಯೊಂದಿಗೆ ಪುರಪ್ರವೇಶ ಗ್ಯೆಯಲ್ಲಿದ್ದಾರೆ.


ಮುನಿದ್ವಯರನ್ನು ಬೆಳ್ತಂಗಡಿ ನಗರದಿಂದ ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ವರೆಗೆ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಗುವುದು. ಇವರು ಮಧ್ಯಾಹ್ನದ 3:30 ರಿಂದ ಮಂಗಳ ಪ್ರವಚನವನ್ನು ಮಾಡಲಿರುವರು. ಅದೇ ರೀತಿ ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರಂದು ಬೆಳ್ತಂಗಡಿ ಬಸದಿಯಲ್ಲಿ ಮುನಿಗಳ ದಿವ್ಯ ಉಪಸ್ಥಿತಿ ಮತ್ತು ಮಾರ್ಗದರ್ಶನ ಅಡಿಯಲ್ಲಿ ವಿಶ್ವಶಾಂತಿ ಗಾಗಿ ಬೆಳಗ್ಗೆ 7:30 ರಿಂದ
ಶ್ರೀ ಶಾಂತಿಚಕ್ರ ಆರಾಧನಾ ವಿಧಾನವು ನಡೆಯಲಿದ್ದು ಇದೇ ದಿನ ಅಪರಾನ್ನ 1.30 ರಿಂದ 3:30ರವರೆಗೆ ಉಭಯ ಜಿಲ್ಲೆಯ ಸುಪ್ರಸಿದ್ಧ ಜೈನ್ ಸಂಗೀತ ಸಂಸ್ಥಾನ ಮೂಡಬಿದ್ರೆಯ ಶ್ರೀಮತಿ ಸೌಮ್ಯ ಮತ್ತು ಸರ್ವೇಶ್ ಜೈನ್ ಇವರಿಂದ ಜೈನ್ ಸಂಗೀತ ಸುಧೆ ವಿಶೇಷ ಗಾನ ಲಹರಿ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿ ಅಪರಾಹ್ನ 3:30 ರಿಂದ ಮುನಿದ್ವಯರಿಂದ ದಿವ್ಯ ಮಂಗಲ ಪ್ರವಚನ ನಡೆಯಲಿದೆ ಎಂದು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ ಜಯವರ್ಮರಾಜ್ ಬಳ್ಳಾಲ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya
error: Content is protected !!