27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವವು ಜ.5 ರಂದು ನಾರಾವಿ ತಂತ್ರಿಗಳಾದ ಶ್ರೀ ಕೃಷ್ಣ ತಂತ್ರಿ ಪ್ರಧಾನ ಅರ್ಚಕರು ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇವರ ನೇತೃತ್ವದಲ್ಲಿ ನಡೆಯಲಿದೆ.

ಜ.4 ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಶ್ರೀ ಸ್ವಸ್ತಿ ಪುಣ್ಯಾಹ ವಾಚನ, ಸಪ್ತ ಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ಪೂಜೆ, ವಾಸ್ತುಬಲಿ, ರಾಕ್ಷೋಘ್ನ ಹೋಮ ರಾತ್ರಿ ಮಹಾಪೂಜೆ, ದಿಕ್ಷಾಲ ಬಲಿ, ಪ್ರಸಾದ ವಿತರಣೆ.

ಜ.5 ಬೆಳಿಗ್ಗೆ ಗಣಯಾಗ, ಪಂಚಮಿಶಂತಿ, ಕಲಶಾರಾಧನೆ, ಪ್ರತಿಷ್ಠಾ ಪ್ರಧಾನ ಹೋಮ, ಮಹಾಮ್ಮಾಯಿ ಅಮ್ಮನವರ ಪುನಃ ಪ್ರತಿಷ್ಠೆ, ಕಂಬಾಭಿಷೇಕ, ಪ್ರಸನ್ನ ಪೂಜೆ, ಪಂಚಾದುರ್ಗಾ ಮಂತ್ರಹೋಮ ಪ್ರಾರಂಭ, ಮಹಾಪೂಜೆ ಅನ್ನಸಂತರ್ಪಣೆ.

ರಾತ್ರಿ ಶ್ರೀ ದೇವಿಯ ಗೊಂದೋಳು ಸೇವೆ, ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಲುಡ-ಕಲ್ಲರ್ಟಿ ದೈವದ ದೊಂಪದ ಬಲಿ ನಡೆಯಲಿದೆ.

Related posts

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!