22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

ನಾರಾವಿ : ಇಲ್ಲಿಯ ಮಂಚಕಲ್ಲು ಅರಸಕಟ್ಟೆ ಶ್ರೀ ಮಹಮ್ಮಾಯಿ ದೇವಿ ಗೊಂದೋಳು ಸಮಿತಿಯಿಂದ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವವು ಜ.5 ರಂದು ನಾರಾವಿ ತಂತ್ರಿಗಳಾದ ಶ್ರೀ ಕೃಷ್ಣ ತಂತ್ರಿ ಪ್ರಧಾನ ಅರ್ಚಕರು ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇವರ ನೇತೃತ್ವದಲ್ಲಿ ನಡೆಯಲಿದೆ.

ಜ.4 ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಶ್ರೀ ಸ್ವಸ್ತಿ ಪುಣ್ಯಾಹ ವಾಚನ, ಸಪ್ತ ಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ಪೂಜೆ, ವಾಸ್ತುಬಲಿ, ರಾಕ್ಷೋಘ್ನ ಹೋಮ ರಾತ್ರಿ ಮಹಾಪೂಜೆ, ದಿಕ್ಷಾಲ ಬಲಿ, ಪ್ರಸಾದ ವಿತರಣೆ.

ಜ.5 ಬೆಳಿಗ್ಗೆ ಗಣಯಾಗ, ಪಂಚಮಿಶಂತಿ, ಕಲಶಾರಾಧನೆ, ಪ್ರತಿಷ್ಠಾ ಪ್ರಧಾನ ಹೋಮ, ಮಹಾಮ್ಮಾಯಿ ಅಮ್ಮನವರ ಪುನಃ ಪ್ರತಿಷ್ಠೆ, ಕಂಬಾಭಿಷೇಕ, ಪ್ರಸನ್ನ ಪೂಜೆ, ಪಂಚಾದುರ್ಗಾ ಮಂತ್ರಹೋಮ ಪ್ರಾರಂಭ, ಮಹಾಪೂಜೆ ಅನ್ನಸಂತರ್ಪಣೆ.

ರಾತ್ರಿ ಶ್ರೀ ದೇವಿಯ ಗೊಂದೋಳು ಸೇವೆ, ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಲುಡ-ಕಲ್ಲರ್ಟಿ ದೈವದ ದೊಂಪದ ಬಲಿ ನಡೆಯಲಿದೆ.

Related posts

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!