23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

ಬೆಳ್ತಂಗಡಿ : ಓಡಿಲ್ನಾಳ ಶ್ರೀ ರಾಮನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ವರ್ಷಾವಧಿ ಜಾತ್ರೆ ಮಹೋತ್ಸವದ ಪ್ರಯುಕ್ತ ಊರಿನ ಭಕ್ತಾದಿಗಳಿಂದ ಹಸಿರು ಹೊರೆ ಕಾಣಿಕೆ, ವಿಶೇಷ ಪೂಜೆ ನಡೆಯಿತು.

ಸನ್ನಿಧಿಯಲ್ಲಿ ಡಿ.28 ರಂದು ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ನಿಲೇಶ್ವರ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಡಿ.28 ರಿಂದ ಜ.1ರ ತನಕ ಜರಗಲಿದ್ದು ಅ ಪ್ರಯುಕ್ತ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ ಅನ್ನದಾನ ನೆರವೇರಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಆರ್ಚಕ ಪ್ರಸನ್ನ ಭಟ್, ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಯುವ ಸಮಿತಿ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನ ಮಂಡಳಿ ಅಧ್ಯಕ್ಷ ಯೋಗೀಶ್ ಅಡ್ಡ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರಾದ ಮೋಹನ್ ಭಟ್, ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿ ಪ್ರಸಾದ್ ಮುಲ್ಲೋಟ್ಟು, ಮಿನಾಕ್ಷಿ ಮೈರಲ್ಕೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


ಡಿ.28 ರಂದು ಶ್ರೀ ಕ್ಷೇತ್ರದಲ್ಲಿ ರಾತ್ರಿ 7ಕ್ಕೆ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಮಂಡಳಿ ವತಿಯಿಂದ ಪರಕೆದ ಪಲ್ಲೆಂಕಿ ತುಳು ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya
error: Content is protected !!