22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

ತೆಂಕಕಾರಂದೂರು: ಊರಿನ ವಿದ್ಯಾ ಅಭಿಮಾನಿಗಳು ಜಾತಿ ಮತ ಭೇದವಿಲ್ಲದೆ ಊರಿನ ವಿದ್ಯಾಮಂದಿರದೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು ಒಗ್ಗಟ್ಟಿನಲ್ಲಿ ಕೆಲಸ ನಿರ್ವಹಿಸಿದಾಗ ವಿದ್ಯಾಮಂದಿರದ ಅಭಿವೃದ್ಧಿಯಾಗುತ್ತದೆ ಎಂದು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯನ್ ಕಾಪಿನಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೋಡಿತ್ತಾಯಕಟ್ಟೆ ಇಲ್ಲಿಯ ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ವಾರ್ಷಿಕೋತ್ಸವದಲ್ಲಿ ಉಳಿಕೆಯಾದ ಹಣದಿಂದ ಶಾಲಾ ಆವರಣ ಗೋಡೆ, ಪುನರ್ ನಿರ್ಮಾಣ ಮತ್ತು ಸೌಂದರೀಕರಣ, ಶಾಲಾ ಅಂಗಳಕ್ಕೆ ಇಂಟರ್ಲಾಕ್ ಅಳವಡಿಕೆ, ಶಾಲಾ ಸ್ಮಾರ್ಟ್ ಕ್ಲಾಸ್ ಮತ್ತು ಗಿಂಡಾಡಿಗುತ್ತು ದಿ. ರಾಮಚಂದ್ರ ಹೆಗಡೆ ಇವರ ಸ್ಮರಣಾರ್ಥ ಇವರ ಮಕ್ಕಳು ಕೊಡ ಮಾಡಿದ ನವೀಕೃತ ಧ್ವಜಸ್ತಂಭ ಕಾಮಗಾರಿಗಳ ಹಸ್ತಾಂತರವು ಇತ್ತೀಚೆಗೆ ನಡೆಯಿತು.

ಕಳೆದ ನವಂಬರ್ ನಲ್ಲಿ ಶಾಲಾ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಶ್ರೀಮತಿ ಪದ್ಮಾವತಿ ಎನ್ ಇವರನ್ನು ಊರ ಪರವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಉತ್ತಮ ಸಾಧನೆಗೈದ ಶಾಲೆಯ ವಿದ್ಯಾರ್ಥಿನಿ ಕುಮಾರಿ ದೀಕ್ಷಾಳನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾಕುಲಾಲ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಆಲಿಮಾರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಘುನಾಥ ತೆಲುಗ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಪ್ರಸನ್ನ ,ಶ್ರೀಮತಿ ಪದ್ಮಾವತಿ, ನಿಜಾಮುದ್ದೀನ್, ಹೇಮಂತ್, ಸಿ ಆರ್ ಪಿ ಕಿರಣ್, ಲೀಲಾವತಿ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಂತೋಷ್ ಹೆಗ್ಡೆ ಪ್ರಸ್ತಾವನೆಗೈದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನಡಿಕ್ಠ ಸ್ವಾಗತಿಸಿ ವರದಿ ಮಂಡಿಸಿದರು. ಶ್ರೀಮತಿ ಜ್ಯೋತಿಯು ಸನ್ಮಾನ ಪತ್ರ ಓದಿದರು. ಶ್ರೀಮತಿ ಶಾಂತಿ ವಾಸ್ ನಿವೃತ್ತ ಮುಖ್ಯ ಶಿಕ್ಷಕಿ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

This image has an empty alt attribute; its file name is per34.jpg

ಶಿಕ್ಷಕಿ ಕುಮಾರಿ ದೇವಿಕಾ ವಂದಿಸಿದರು. ಕಾಶಿಪಟ್ಣ ಪ್ರೌಢಶಾಲೆಯ ಶಿಕ್ಷಕ ದೇವುದಾಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳ ಆಕರ್ಷಕ ಪ್ರತಿಭಾ ಸಿಂಚನ ಕಾರ್ಯಕ್ರಮ ಜರಗಿತು

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!