22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಿತ್ತಿಪತ್ರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಡಾ.ಜಯಕುಮಾರ ಶೆಟ್ಟಿಯವರು ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೋ.ಪ್ರಮೋದ್ ಕುಮಾರ್.ಬಿ ಅವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಎಸ್.ಡಿ.ಎಂ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಪವಿತ್ರ ಹಾಗೂ ಎಸ್.ಡಿ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಲಾ ಶಿಕ್ಷಕ ಶ್ರೀರಾಮ ಅವರು ತೀರ್ಪುಗಾರರಾಗಿ ಭಾಗವಹಿಸಿದರು.

ಆಂಗ್ಲ ಭಾಷಾ ವಿಭಾಗ ಪ್ರಥಮ, ಜೀವಶಾಸ್ತ್ರ ಹಾಗೂ ಗಣಿತ ವಿಭಾಗ ದ್ವಿತೀಯ, ಭೌತಶಾಸ್ತ್ರ ವಿಭಾಗ ತೃತೀಯ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!