ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಎದುರು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆ ಹಿಂದೆತೆಗೆಂದು ಕೈಗೊಳ್ಳಲಾಯಿತು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್‌ ಡಿ .ಬಳಂಜ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಿರಂತರ ಜೊತೆ ಮಾತುಕತೆ ನಡೆಸಿ, ಪಿಡಿಓ ದೀಪಕ್ ಮತ್ತು ಕಾರ್ಯದರ್ಶಿ ಭಾರತಿ ಅವರಿಗೆಯ ಶೋಕಾಸ್‌ ನೋಟಿಸ್‌ ನೀಡಲಾಗುವುದು ಹಾಗೂ ಇ.ಓಗೆ ಮಾಹಿತಿ ನೀಡಿ ಕ್ರಮಕೈಗೊಳ್ಳುವುದಾಗಿ ಪ್ರಶಾಂತ್ ಭರವಸೆ ನೀಡಿದರು.

ಈ ಸಂದರ್ಭ ಪಿಡಿಒ ದೀಪಕ್ ರಾಜ್ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಗ್ರಾ,ಪಂ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಿದರು.

Leave a Comment

error: Content is protected !!