ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಜಿರೆ ಜುಮ್ಮಾ ಮಸೀದಿಯ ಧರ್ಮಗುರುಗಳು, ಕಟ್ಟಡ ಮಾಲಕರು, ದೇವಸ್ಥಾನದ ಅರ್ಚಕರು, ಬಂಧುಗಳು ಉಪಸ್ಥಿತರಿದ್ದರು.

ಸಂಸ್ಥೆ ಮಾಲಕ ರಂಜಿತ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Leave a Comment

error: Content is protected !!