ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಮಹಮ್ಮದ್ ಅವರು ಡಿ.24ರಂದು ಬೆಳಿಗ್ಗೆ (ಕೆಎ 21 ಎಲ್‌ 0551 ನೇ) ಮೋಟಾರ್‌ ಸೈಕಲ್‌ ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿ, ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಮೋಟಾರ್ ಸೈಕಲ್ ಕಾಣೆಯಾದ ಘಟನೆ ನಡೆದಿದೆ.

ಈ ಬಗ್ಗೆ ಸ್ಥಳೀಯರಲ್ಲಿ ಮತ್ತು ಸುತ್ತಮುತ್ತ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗದೇ ಇರುವುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 123/2023 ಕಲಂ;379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!