25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

ಬೆಳ್ತಂಗಡಿ: ಯಾವುದೇ ದಾಖಲಾತಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು
ಬೆಳ್ತಂಗಡಿ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಪತ್ತೆ ಹಚ್ಚಿದ್ದು, ಆರೋಪಿಗಳು ಪರಾರಿಯಾದ ಘಟನೆ ಡಿ.27 ರಂದು ನಡೆದಿದೆ.

ಬೆಳ್ತಂಗಡಿ‌ ಪೊಲೀಸ್ ಉಪನಿರೀಕ್ಷಕರಾದ ಧನರಾಜ್‌ ಟಿ ಎಂ ಹಾಗೂ ಸಿಬ್ಬಂದಿಗಳು ಲಾರಿಯನ್ನು ತಡೆದಾಗ, ಲಾರಿ ಚಾಲಕ ರಂಜಿತ್‌ ಹಾಗೂ ರಾಧಾಕೃಷ್ಣ ಎಂಬವರು ಲಾರಿಯನ್ನು ನಿಲ್ಲಿಸಿ ಸ್ಥಳದಿಂದ ಓಡಿಹೋಗಿದ್ದು, ಪೊಲೀಸರು ಲಾರಿಯನ್ನು ಪರಿಶೀಲಿಸಿದಾಗ ಯಾವುದೇ ದಾಖಲಾತಿ ಇಲ್ಲದೆ ಎಲ್ಲಿಂದಲೋ ರೂ 15.000/- ಬೆಲೆ ಬಾಳುವ ಮರಳನ್ನು ಕಳವು ಮಾಡಿ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 122/2023 ಕಲಂ:379 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya
error: Content is protected !!