July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

ಬೆಳ್ತಂಗಡಿ: ಯಾವುದೇ ದಾಖಲಾತಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು
ಬೆಳ್ತಂಗಡಿ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಪತ್ತೆ ಹಚ್ಚಿದ್ದು, ಆರೋಪಿಗಳು ಪರಾರಿಯಾದ ಘಟನೆ ಡಿ.27 ರಂದು ನಡೆದಿದೆ.

ಬೆಳ್ತಂಗಡಿ‌ ಪೊಲೀಸ್ ಉಪನಿರೀಕ್ಷಕರಾದ ಧನರಾಜ್‌ ಟಿ ಎಂ ಹಾಗೂ ಸಿಬ್ಬಂದಿಗಳು ಲಾರಿಯನ್ನು ತಡೆದಾಗ, ಲಾರಿ ಚಾಲಕ ರಂಜಿತ್‌ ಹಾಗೂ ರಾಧಾಕೃಷ್ಣ ಎಂಬವರು ಲಾರಿಯನ್ನು ನಿಲ್ಲಿಸಿ ಸ್ಥಳದಿಂದ ಓಡಿಹೋಗಿದ್ದು, ಪೊಲೀಸರು ಲಾರಿಯನ್ನು ಪರಿಶೀಲಿಸಿದಾಗ ಯಾವುದೇ ದಾಖಲಾತಿ ಇಲ್ಲದೆ ಎಲ್ಲಿಂದಲೋ ರೂ 15.000/- ಬೆಲೆ ಬಾಳುವ ಮರಳನ್ನು ಕಳವು ಮಾಡಿ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 122/2023 ಕಲಂ:379 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya
error: Content is protected !!