ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ ಕಾರ್ಯಕ್ರಮನ್ನು ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಮೋಹನ್ ಕುಮಾರ್ ಉಜಿರೆ ಹಾಗೂ ಪ್ರಭಾಕರ್ ಶೆಟ್ಟಿ ಕಂದೂರು ನೆರವೇರಿಸಿ ಶುಭಕೋರಿದರು.

ವೈದಿಕ ವಿಧಿ ವಿಧಾನವನ್ನು ಅರ್ಚಕರಾದ ರವಿ ಭಟ್ ಪಜಿರಡ್ಕ, ರಘುರಾಮ್ ದಡ್ಡು ಮನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಚೆನ್ನಪ್ಪ ಗೌಡ ಕರಿಯನೆಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ವೆಂಕಟರಮನ ಹೆಬ್ಬಾರ್ , ಸಮಿತಿಯ ಸದಸ್ಯರುಗಳು, ಮುಂಡಾಜೆ ಸಿಎ ಬ್ಯಾಂಕಿನ ಸದಸ್ಯರಾದ ಶಶಿಧರ್ ಕಲ್ಮಂಜ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ತುಕಾರಾಂ ಸಾಲಿಯಾನ್ , ಹಿರಿಂಬಿ ಸೀತಾರಾಮ್ ಭಟ್ ಉಪಸ್ಥಿತರಿದ್ದರು.

ಪರಾರಿ ವೆಂಕಟರಮಣ ಹೆಬ್ಬಾರ್ ಸ್ವಾಗತಿಸಿದರು. ಶ್ರೀನಿವಾಸ್ ರಾವ್ ಪ್ರಸ್ತಾವಿಕ ಮಾತನಾಡಿ ಧನ್ಯವಾದವಿತ್ತರು.

Leave a Comment

error: Content is protected !!