37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಿರಿಧಾನ್ಯಗಳ ಆಹಾರ ಬಳಕೆಯ ಕ್ರಾಂತಿಯು ನಡೆಯುತ್ತಿದೆ. ಹಲವಾರು ರೈತರು ತಮ್ಮ ಮೂಲ ಬೆಳೆಗಳಿಗೆ ಪರ್ಯಾಯವಾಗಿ ಸಿರಿಧಾನ್ಯ ಬೆಳೆಯುವತ್ತ ಮನಸ್ಸು ಮಾಡುತ್ತಿದ್ದಾರೆ. ತನ್ಮೂಲಕ ರೈತರ ಸಬಲೀಕರಕರಣ ಸಾಧ್ಯವಾಗುತ್ತಿದೆ. ಸಾಮಾನ್ಯ ವ್ಯಕ್ತಿಗೂ ಸಹ ಸಿರಿಧಾನ್ಯಗಳ ಬಳಕೆಯ ಅರಿವು ಹೆಚ್ಚಾಗುತ್ತಿದೆ. ಒಟ್ಟಾರೆ ಇದು ಆರೋಗವರ್ಧಕವಾಗಿದ್ದು , ಔಷಧ ರೂಪದಲ್ಲಿ ಸಿರಿಧಾನ್ಯ ಆಹಾರವಾಗುತ್ತಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿಧಾನ್ಯಗಳ ದ.ಕ ಜಿಲ್ಲಾ
ಮಾರುಕಟ್ಟೆ ಅಧಿಕಾರಿ ಸಂದೀಪ್ ಭಟ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆಯುತ್ತಿರುವ ‘ ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಎಂಬ ಸಿರಿಧಾನ್ಯ ಜಾಗೃತಿಯ ಬಗ್ಗೆ ಮಾತನಾಡಿದರು.

ನಮ್ಮ ಆಹಾರದ ಕಾಳಜಿ ನಾವೇ ಮಾಡಿಕೊಳ್ಳಬೇಕು. ಅಧಿಕ ಪೌಷ್ಠಿಕಾಂಶ ಇರುವ ಆಹಾರಕ್ರಮ ನಮ್ಮದಾಗಬೇಕಾದರೆ ಸಿರಿಧಾನ್ಯಗಳ ಬಳಕೆ ಹೆಚ್ಚು ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ರಾ. ಸೇ. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸ್ವಯಂ ಸೇವಕ ಬೋರೇಶ್ ಸ್ವಾಗತಿಸಿದರು. ಸರಣ್ಯಾ ನಿರೂಪಿಸಿ , ವಂದಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya
error: Content is protected !!