24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಿರಿಧಾನ್ಯಗಳ ಆಹಾರ ಬಳಕೆಯ ಕ್ರಾಂತಿಯು ನಡೆಯುತ್ತಿದೆ. ಹಲವಾರು ರೈತರು ತಮ್ಮ ಮೂಲ ಬೆಳೆಗಳಿಗೆ ಪರ್ಯಾಯವಾಗಿ ಸಿರಿಧಾನ್ಯ ಬೆಳೆಯುವತ್ತ ಮನಸ್ಸು ಮಾಡುತ್ತಿದ್ದಾರೆ. ತನ್ಮೂಲಕ ರೈತರ ಸಬಲೀಕರಕರಣ ಸಾಧ್ಯವಾಗುತ್ತಿದೆ. ಸಾಮಾನ್ಯ ವ್ಯಕ್ತಿಗೂ ಸಹ ಸಿರಿಧಾನ್ಯಗಳ ಬಳಕೆಯ ಅರಿವು ಹೆಚ್ಚಾಗುತ್ತಿದೆ. ಒಟ್ಟಾರೆ ಇದು ಆರೋಗವರ್ಧಕವಾಗಿದ್ದು , ಔಷಧ ರೂಪದಲ್ಲಿ ಸಿರಿಧಾನ್ಯ ಆಹಾರವಾಗುತ್ತಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿಧಾನ್ಯಗಳ ದ.ಕ ಜಿಲ್ಲಾ
ಮಾರುಕಟ್ಟೆ ಅಧಿಕಾರಿ ಸಂದೀಪ್ ಭಟ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆಯುತ್ತಿರುವ ‘ ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಎಂಬ ಸಿರಿಧಾನ್ಯ ಜಾಗೃತಿಯ ಬಗ್ಗೆ ಮಾತನಾಡಿದರು.

ನಮ್ಮ ಆಹಾರದ ಕಾಳಜಿ ನಾವೇ ಮಾಡಿಕೊಳ್ಳಬೇಕು. ಅಧಿಕ ಪೌಷ್ಠಿಕಾಂಶ ಇರುವ ಆಹಾರಕ್ರಮ ನಮ್ಮದಾಗಬೇಕಾದರೆ ಸಿರಿಧಾನ್ಯಗಳ ಬಳಕೆ ಹೆಚ್ಚು ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ರಾ. ಸೇ. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸ್ವಯಂ ಸೇವಕ ಬೋರೇಶ್ ಸ್ವಾಗತಿಸಿದರು. ಸರಣ್ಯಾ ನಿರೂಪಿಸಿ , ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
error: Content is protected !!