22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಿರಿಧಾನ್ಯಗಳ ಆಹಾರ ಬಳಕೆಯ ಕ್ರಾಂತಿಯು ನಡೆಯುತ್ತಿದೆ. ಹಲವಾರು ರೈತರು ತಮ್ಮ ಮೂಲ ಬೆಳೆಗಳಿಗೆ ಪರ್ಯಾಯವಾಗಿ ಸಿರಿಧಾನ್ಯ ಬೆಳೆಯುವತ್ತ ಮನಸ್ಸು ಮಾಡುತ್ತಿದ್ದಾರೆ. ತನ್ಮೂಲಕ ರೈತರ ಸಬಲೀಕರಕರಣ ಸಾಧ್ಯವಾಗುತ್ತಿದೆ. ಸಾಮಾನ್ಯ ವ್ಯಕ್ತಿಗೂ ಸಹ ಸಿರಿಧಾನ್ಯಗಳ ಬಳಕೆಯ ಅರಿವು ಹೆಚ್ಚಾಗುತ್ತಿದೆ. ಒಟ್ಟಾರೆ ಇದು ಆರೋಗವರ್ಧಕವಾಗಿದ್ದು , ಔಷಧ ರೂಪದಲ್ಲಿ ಸಿರಿಧಾನ್ಯ ಆಹಾರವಾಗುತ್ತಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿಧಾನ್ಯಗಳ ದ.ಕ ಜಿಲ್ಲಾ
ಮಾರುಕಟ್ಟೆ ಅಧಿಕಾರಿ ಸಂದೀಪ್ ಭಟ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆಯುತ್ತಿರುವ ‘ ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಎಂಬ ಸಿರಿಧಾನ್ಯ ಜಾಗೃತಿಯ ಬಗ್ಗೆ ಮಾತನಾಡಿದರು.

ನಮ್ಮ ಆಹಾರದ ಕಾಳಜಿ ನಾವೇ ಮಾಡಿಕೊಳ್ಳಬೇಕು. ಅಧಿಕ ಪೌಷ್ಠಿಕಾಂಶ ಇರುವ ಆಹಾರಕ್ರಮ ನಮ್ಮದಾಗಬೇಕಾದರೆ ಸಿರಿಧಾನ್ಯಗಳ ಬಳಕೆ ಹೆಚ್ಚು ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ರಾ. ಸೇ. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸ್ವಯಂ ಸೇವಕ ಬೋರೇಶ್ ಸ್ವಾಗತಿಸಿದರು. ಸರಣ್ಯಾ ನಿರೂಪಿಸಿ , ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya
error: Content is protected !!