22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಿರಿಧಾನ್ಯಗಳ ಆಹಾರ ಬಳಕೆಯ ಕ್ರಾಂತಿಯು ನಡೆಯುತ್ತಿದೆ. ಹಲವಾರು ರೈತರು ತಮ್ಮ ಮೂಲ ಬೆಳೆಗಳಿಗೆ ಪರ್ಯಾಯವಾಗಿ ಸಿರಿಧಾನ್ಯ ಬೆಳೆಯುವತ್ತ ಮನಸ್ಸು ಮಾಡುತ್ತಿದ್ದಾರೆ. ತನ್ಮೂಲಕ ರೈತರ ಸಬಲೀಕರಕರಣ ಸಾಧ್ಯವಾಗುತ್ತಿದೆ. ಸಾಮಾನ್ಯ ವ್ಯಕ್ತಿಗೂ ಸಹ ಸಿರಿಧಾನ್ಯಗಳ ಬಳಕೆಯ ಅರಿವು ಹೆಚ್ಚಾಗುತ್ತಿದೆ. ಒಟ್ಟಾರೆ ಇದು ಆರೋಗವರ್ಧಕವಾಗಿದ್ದು , ಔಷಧ ರೂಪದಲ್ಲಿ ಸಿರಿಧಾನ್ಯ ಆಹಾರವಾಗುತ್ತಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿಧಾನ್ಯಗಳ ದ.ಕ ಜಿಲ್ಲಾ
ಮಾರುಕಟ್ಟೆ ಅಧಿಕಾರಿ ಸಂದೀಪ್ ಭಟ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆಯುತ್ತಿರುವ ‘ ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಎಂಬ ಸಿರಿಧಾನ್ಯ ಜಾಗೃತಿಯ ಬಗ್ಗೆ ಮಾತನಾಡಿದರು.

ನಮ್ಮ ಆಹಾರದ ಕಾಳಜಿ ನಾವೇ ಮಾಡಿಕೊಳ್ಳಬೇಕು. ಅಧಿಕ ಪೌಷ್ಠಿಕಾಂಶ ಇರುವ ಆಹಾರಕ್ರಮ ನಮ್ಮದಾಗಬೇಕಾದರೆ ಸಿರಿಧಾನ್ಯಗಳ ಬಳಕೆ ಹೆಚ್ಚು ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ರಾ. ಸೇ. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸ್ವಯಂ ಸೇವಕ ಬೋರೇಶ್ ಸ್ವಾಗತಿಸಿದರು. ಸರಣ್ಯಾ ನಿರೂಪಿಸಿ , ವಂದಿಸಿದರು.

Related posts

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya
error: Content is protected !!