23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಿರಿಧಾನ್ಯಗಳ ಆಹಾರ ಬಳಕೆಯ ಕ್ರಾಂತಿಯು ನಡೆಯುತ್ತಿದೆ. ಹಲವಾರು ರೈತರು ತಮ್ಮ ಮೂಲ ಬೆಳೆಗಳಿಗೆ ಪರ್ಯಾಯವಾಗಿ ಸಿರಿಧಾನ್ಯ ಬೆಳೆಯುವತ್ತ ಮನಸ್ಸು ಮಾಡುತ್ತಿದ್ದಾರೆ. ತನ್ಮೂಲಕ ರೈತರ ಸಬಲೀಕರಕರಣ ಸಾಧ್ಯವಾಗುತ್ತಿದೆ. ಸಾಮಾನ್ಯ ವ್ಯಕ್ತಿಗೂ ಸಹ ಸಿರಿಧಾನ್ಯಗಳ ಬಳಕೆಯ ಅರಿವು ಹೆಚ್ಚಾಗುತ್ತಿದೆ. ಒಟ್ಟಾರೆ ಇದು ಆರೋಗವರ್ಧಕವಾಗಿದ್ದು , ಔಷಧ ರೂಪದಲ್ಲಿ ಸಿರಿಧಾನ್ಯ ಆಹಾರವಾಗುತ್ತಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿಧಾನ್ಯಗಳ ದ.ಕ ಜಿಲ್ಲಾ
ಮಾರುಕಟ್ಟೆ ಅಧಿಕಾರಿ ಸಂದೀಪ್ ಭಟ್ ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆಯುತ್ತಿರುವ ‘ ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಎಂಬ ಸಿರಿಧಾನ್ಯ ಜಾಗೃತಿಯ ಬಗ್ಗೆ ಮಾತನಾಡಿದರು.

ನಮ್ಮ ಆಹಾರದ ಕಾಳಜಿ ನಾವೇ ಮಾಡಿಕೊಳ್ಳಬೇಕು. ಅಧಿಕ ಪೌಷ್ಠಿಕಾಂಶ ಇರುವ ಆಹಾರಕ್ರಮ ನಮ್ಮದಾಗಬೇಕಾದರೆ ಸಿರಿಧಾನ್ಯಗಳ ಬಳಕೆ ಹೆಚ್ಚು ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ರಾ. ಸೇ. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಗೌರವಿಸಿದರು. ಸ್ವಯಂ ಸೇವಕ ಬೋರೇಶ್ ಸ್ವಾಗತಿಸಿದರು. ಸರಣ್ಯಾ ನಿರೂಪಿಸಿ , ವಂದಿಸಿದರು.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!