ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಯೋಜಿಸಲ್ಪಟ್ಟಿತು.
ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕು. ರಕ್ಷಾ ಕೆ. ಕುವೆಂಪುರವರ ಬಗ್ಗೆ ಮಾತನಾಡಿ ವಿಶ್ವ ಮಾನವ ಸಂದೇಶ ನೀಡಿದರು. ಮೂರೂ ತರಗತಿಗಳ ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ನಡೆಯಿತು.

ವೇದಿಕೆಯಲ್ಲಿ ಶಿಕ್ಷಕರಾದ ಜಗದೀಶ್ ಎನ್, ರವಿಚಂದ್ರ ಜೈನ್, ಶ್ರೀಮತಿ ಕೋಕಿಲಾ, ಮಾರ್ಗದರ್ಶಿ ಶಿಕ್ಷಕರಾದ ಸುಮನ್ ಯು ಎಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಕು. ಇಂದುಮತಿಯವರು ಸ್ವಾಗತಿಸಿ ವಂದಿಸಿದರು.

Leave a Comment

error: Content is protected !!