23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

ಬೆಳ್ತಂಗಡಿ : ಪಟ್ಟಣ ಪಂಚಾಯತ್ ಮತ್ತು ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ ಸಹಯೋಗದೊಂದಿಗೆ
ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.30 ರಂದು ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಸಾಕ್ಷರತಾ ಆರ್ಥಿಕ ಸಮಿತಿ ಸಂಯೋಜಕಿ ಉಷಾ ವಿ. ನಾಯಕ್ ರವರು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಪ್ರತಿಜ್ಞಾ ವಿಧಿ ಮಾಡಿದರು.

ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪ್ರಧಾನ್ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜೀವನ್‌ ಜ್ಯೋತಿ ಭೀಮಾ ಯೋಜನೆ, ಉಜ್ವಲ ಗ್ಯಾಸ್ ಯೋಜನೆ ಹಾಗೂ ಇನ್ನಿತರ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಮಾಡಲಾಯಿತು.

ಈ ವೇಳೆ ಭತ್ತದ ಕೃಷಿ ವಿಭಾಗದಲ್ಲಿ ಮಹೇಶ್ ಕೆಲ್ಲಗುತ್ತು, ಯಶೋಧ ಅಲ್ಲಾಟ ಬೈಲು, ಶಿಕ್ಷಣ ವಿಭಾಗದಲ್ಲಿ ಅತ್ಯಾಧಿಕ ಅಂಕ ಪಡೆದ ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿ ಅಭಿಷೇಕ್ ವಿ.ಎಂ., ಹಾಗೂ ವಾಣಿ ಪ.ಪೂ ಕಾಲೇಜಿನ ವಿದ್ಯಾರ್ಥಿ ರಕ್ಷಿತಾ, ಬೀದಿ ವ್ಯಾಪಾರಸ್ಥರಾದ ಅಬೂಸಾಲಿ, ಅಶೋಕ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ.ಪಂ. ನಿಟಕಪೂರ್ವಾಧ್ಯಕ್ಷೆ ರಜನಿ ಕುಡ್ವ, ನೊಡೆಲ್ ಅಧಿಕಾರಿಯಾಗಿ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಸುಕೇಶ್ ಕುಮಾರ್, ಎಸ್.ಬಿಐ ಬ್ಯಾಂಕ್, ಫೆಡರಲ್ ಬ್ಯಾಂಕ್, ಕೆನರಾ ಬ್ಯಾಂಕ್ ವ್ಯವಸ್ಥಾಪಕರು, ಉಪಸ್ಥಿತರಿದ್ದರು.

ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ. ವನಿತಾ ಪ್ರಾರ್ಥಿಸಿ , ಚಂದ್ರಹಾಸ್ ಬಳಂಜ ನಿರೂಪಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
error: Content is protected !!