32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿ ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ (SSIF) -2024ಕ್ಕೆ ಆಯ್ಕೆಯಾಗಿದ್ದಾರೆ.

ಡಿ.27 ರಂದು ಜವಾಹರ್ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಬೆಂಗಳೂರು ಇಲ್ಲಿ ನಡೆದಿರುವ ಸ್ಪರ್ಧೆಯಲ್ಲಿ “ಸ್ಮಾರ್ಟ್ ಬೋಟ್” ಎಂಬ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ಅವರು ತಮ್ಮ ಕೌಶಲ್ಯ ಮೆರೆದಿದ್ದಾರೆ. ಆ ಮೂಲಕ ಅವರು ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತದ ವಿಜ್ಞಾನ ಮೇಳ ( SSIF)-2024 ರ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಈ ಪ್ರತಿಭಾನ್ವಿತ ವಿದ್ಯಾರ್ಥಿಗೆ ಶಾಲೆಯ ಮುಖ್ಯೋಪಾಧ್ಯಾಯನಿ ವಿದ್ಯಾಲಕ್ಷ್ಮಿ ಯು ನಾಯಕ್ ರವರ ಪ್ರೋತ್ಸಾಹದೊಂದಿಗೆ ವಿಜ್ಞಾನ ಶಿಕ್ಷಕಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಇವರು ಬಿ ಎನ್ ಚಂದ್ರಶೇಖರ್ ಹಾಗೂ ಧನ್ಯವತಿ ದಂಪತಿಯ ಪುತ್ರನಾಗಿರುತ್ತಾರೆ.

Related posts

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya
error: Content is protected !!