24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿ ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ (SSIF) -2024ಕ್ಕೆ ಆಯ್ಕೆಯಾಗಿದ್ದಾರೆ.

ಡಿ.27 ರಂದು ಜವಾಹರ್ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಬೆಂಗಳೂರು ಇಲ್ಲಿ ನಡೆದಿರುವ ಸ್ಪರ್ಧೆಯಲ್ಲಿ “ಸ್ಮಾರ್ಟ್ ಬೋಟ್” ಎಂಬ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ಅವರು ತಮ್ಮ ಕೌಶಲ್ಯ ಮೆರೆದಿದ್ದಾರೆ. ಆ ಮೂಲಕ ಅವರು ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತದ ವಿಜ್ಞಾನ ಮೇಳ ( SSIF)-2024 ರ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಈ ಪ್ರತಿಭಾನ್ವಿತ ವಿದ್ಯಾರ್ಥಿಗೆ ಶಾಲೆಯ ಮುಖ್ಯೋಪಾಧ್ಯಾಯನಿ ವಿದ್ಯಾಲಕ್ಷ್ಮಿ ಯು ನಾಯಕ್ ರವರ ಪ್ರೋತ್ಸಾಹದೊಂದಿಗೆ ವಿಜ್ಞಾನ ಶಿಕ್ಷಕಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಇವರು ಬಿ ಎನ್ ಚಂದ್ರಶೇಖರ್ ಹಾಗೂ ಧನ್ಯವತಿ ದಂಪತಿಯ ಪುತ್ರನಾಗಿರುತ್ತಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
error: Content is protected !!