September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿ ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ (SSIF) -2024ಕ್ಕೆ ಆಯ್ಕೆಯಾಗಿದ್ದಾರೆ.

ಡಿ.27 ರಂದು ಜವಾಹರ್ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಬೆಂಗಳೂರು ಇಲ್ಲಿ ನಡೆದಿರುವ ಸ್ಪರ್ಧೆಯಲ್ಲಿ “ಸ್ಮಾರ್ಟ್ ಬೋಟ್” ಎಂಬ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ಅವರು ತಮ್ಮ ಕೌಶಲ್ಯ ಮೆರೆದಿದ್ದಾರೆ. ಆ ಮೂಲಕ ಅವರು ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತದ ವಿಜ್ಞಾನ ಮೇಳ ( SSIF)-2024 ರ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಈ ಪ್ರತಿಭಾನ್ವಿತ ವಿದ್ಯಾರ್ಥಿಗೆ ಶಾಲೆಯ ಮುಖ್ಯೋಪಾಧ್ಯಾಯನಿ ವಿದ್ಯಾಲಕ್ಷ್ಮಿ ಯು ನಾಯಕ್ ರವರ ಪ್ರೋತ್ಸಾಹದೊಂದಿಗೆ ವಿಜ್ಞಾನ ಶಿಕ್ಷಕಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಇವರು ಬಿ ಎನ್ ಚಂದ್ರಶೇಖರ್ ಹಾಗೂ ಧನ್ಯವತಿ ದಂಪತಿಯ ಪುತ್ರನಾಗಿರುತ್ತಾರೆ.

Related posts

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!