22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿ ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ (SSIF) -2024ಕ್ಕೆ ಆಯ್ಕೆಯಾಗಿದ್ದಾರೆ.

ಡಿ.27 ರಂದು ಜವಾಹರ್ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಬೆಂಗಳೂರು ಇಲ್ಲಿ ನಡೆದಿರುವ ಸ್ಪರ್ಧೆಯಲ್ಲಿ “ಸ್ಮಾರ್ಟ್ ಬೋಟ್” ಎಂಬ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ಅವರು ತಮ್ಮ ಕೌಶಲ್ಯ ಮೆರೆದಿದ್ದಾರೆ. ಆ ಮೂಲಕ ಅವರು ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತದ ವಿಜ್ಞಾನ ಮೇಳ ( SSIF)-2024 ರ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಈ ಪ್ರತಿಭಾನ್ವಿತ ವಿದ್ಯಾರ್ಥಿಗೆ ಶಾಲೆಯ ಮುಖ್ಯೋಪಾಧ್ಯಾಯನಿ ವಿದ್ಯಾಲಕ್ಷ್ಮಿ ಯು ನಾಯಕ್ ರವರ ಪ್ರೋತ್ಸಾಹದೊಂದಿಗೆ ವಿಜ್ಞಾನ ಶಿಕ್ಷಕಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಇವರು ಬಿ ಎನ್ ಚಂದ್ರಶೇಖರ್ ಹಾಗೂ ಧನ್ಯವತಿ ದಂಪತಿಯ ಪುತ್ರನಾಗಿರುತ್ತಾರೆ.

Related posts

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!