24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿ ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ (SSIF) -2024ಕ್ಕೆ ಆಯ್ಕೆಯಾಗಿದ್ದಾರೆ.

ಡಿ.27 ರಂದು ಜವಾಹರ್ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಬೆಂಗಳೂರು ಇಲ್ಲಿ ನಡೆದಿರುವ ಸ್ಪರ್ಧೆಯಲ್ಲಿ “ಸ್ಮಾರ್ಟ್ ಬೋಟ್” ಎಂಬ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ಅವರು ತಮ್ಮ ಕೌಶಲ್ಯ ಮೆರೆದಿದ್ದಾರೆ. ಆ ಮೂಲಕ ಅವರು ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತದ ವಿಜ್ಞಾನ ಮೇಳ ( SSIF)-2024 ರ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ಈ ಪ್ರತಿಭಾನ್ವಿತ ವಿದ್ಯಾರ್ಥಿಗೆ ಶಾಲೆಯ ಮುಖ್ಯೋಪಾಧ್ಯಾಯನಿ ವಿದ್ಯಾಲಕ್ಷ್ಮಿ ಯು ನಾಯಕ್ ರವರ ಪ್ರೋತ್ಸಾಹದೊಂದಿಗೆ ವಿಜ್ಞಾನ ಶಿಕ್ಷಕಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.

ಇವರು ಬಿ ಎನ್ ಚಂದ್ರಶೇಖರ್ ಹಾಗೂ ಧನ್ಯವತಿ ದಂಪತಿಯ ಪುತ್ರನಾಗಿರುತ್ತಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya
error: Content is protected !!