ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶಕ್ತಿನಗರ ಗುರುವಾಯನಕೆರೆ ಇಲ್ಲಿ ಪ್ರತಿ ವರ್ಷ ಜರಗುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಇಲ್ಲಿನ ಸದಸ್ಯರಿಂದ ಭಜನ್ ಸಂಧ್ಯಾ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಭಕ್ತರು ಹಾಗೂ ಊರಿನ ಗಣ್ಯರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವು ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಮತ್ತು ಸನಾತನ ಸಾರಥಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇಲ್ಲಿನ ಅಧ್ಯಕ್ಷರಾದ ಸಿಎಚ್ ಪ್ರಭಾಕರ್ ಇವರ ನೇತೃತ್ವದಲ್ಲಿ ಸದಸ್ಯರೆಲ್ಲರೂ ಪಾಲ್ಗೊಂಡು ಸಹಕರಿಸಿದರು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗುರುಸ್ವಾಮಿಗಳು ಪ್ರಸಾದವನ್ನು ಕೊಟ್ಟು ಆಶೀರ್ವದಿಸಿದರು.

Leave a Comment

error: Content is protected !!