23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಬೆಳಾಲು ಮತ್ತು ಉಜಿರೆ ಶ್ರೀ ಧ ಮ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದವರಿಂದ ಪರೀಕ್ಷೆಯ ತಯಾರಿ, ಎಸ್ ಎಸ್ ಎಲ್ ಸಿ ಯ ನಂತರದ ಅವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಗ್ರಾಮ ಪಂಚಾಯತ್ತಿನ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡರು ಮಾತನಾಡುತ್ತಾ, ಯೋಜನಾ ಬದ್ಧವಾದ ಓದು ಮತ್ತು ಗುರಿ ನಿರ್ಧಾರಿತ ಅಧ್ಯಯನ ವಿದ್ಯಾರ್ಥಿ ಜೀವನದ ಯಶಸ್ಸಿನ ಮುಖ್ಯ ಅಂಶವಾಗಿರುತ್ತದೆ. ಜೇವನದಲ್ಲಿ ಅವಕಾಶಗಳು ಎಲ್ಲರಿಗೂ ಸಮಾನವಾಗಿರುತ್ತದೆ. ವಿದ್ಯಾರ್ಥಿಗಳು ಅಂತಹ ಅವಕಾಶವನ್ನು ಪಡಕೊಳ್ಳುವ ಪ್ರಯತ್ನಶೀಲರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಉಪನ್ಯಾಸಕರಾದ ಡಾ. ಅಕ್ಷತಾ ರಾವ್ ಮತ್ತು ಪಂಚಾಯತ್ತಿನ ವಾಚನಾಲಯ ಅಧಿಕಾರಿ ಡೀಕಯ್ಯ ಗೌಡರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!